ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಪೋಷಕರು ಪಾಕೆಟ್ ಮನಿ ನೀಡಲಿಲ್ಲವೆಂದು ವಿದ್ಯಾರ್ಥಿ ಆತ್ಯಹತ್ಯೆ!

ಪೋಷಕರು ಪಾಕೆಟ್ ಮನಿ ನೀಡದಿದ್ದಕ್ಕೆ ಮನನೊಂದ 17 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುತಾರ್ ನಲ್ಲಿ ನಡೆದಿದೆ. ಸುಶಾಂತ್ ಮೃತ ವಿದ್ಯಾರ್ಥಿ.  

ಮಂಗಳೂರು: ಪೋಷಕರು ಪಾಕೆಟ್ ಮನಿ ನೀಡದಿದ್ದಕ್ಕೆ ಮನನೊಂದ 17 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುತಾರ್ ನಲ್ಲಿ ನಡೆದಿದೆ. ಸುಶಾಂತ್ ಮೃತ ವಿದ್ಯಾರ್ಥಿ.  

ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿಗೆ ಡಿಪ್ಲೋಮಾ ಕೋರ್ಸ್ ಗೆ ದಾಖಲಾಗಿದ್ದ ಈತ ತರಗತಿ ಆರಂಭದ ಮೊದಲ ದಿನವೇ ಪಾಕೆಟ್ ಮನಿ ಸಿಗಲಿಲ್ಲ ಎಂದು ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಭಾಸ್ಕರ್ ಪೂಜಾರಿ ಮತ್ತು ದಾಕ್ಷಾಯಿಣಿ ಮೃತ ಸುಶಾಂತ್ ನ ತಂದೆ- ತಾಯಿಗಳು. ಇವರೆಲ್ಲರೂ ಕುತಾರ್‌ನ ಸುಭಾಷ್ ನಗರದಲ್ಲಿ ವಾಸವಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇಲ್ಲಿನ ಕ್ಯಾಪಿಟಾನಿಯೊ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದ ಸುಶಾಂತ್ ಬುಧವಾರ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ ಪಡೆದಿದ್ದ ಎನ್ನಲಾಗಿದೆ. 

ಪೋಷಕರು 500 ರೂಪಾಯಿ ನೀಡದ ಕಾರಣ ಆತ ಮನೆಯಲ್ಲೇ ಉಳಿದಿದ್ದ. ನಂತರ, ತಂದೆ ಇಲ್ಲದಿದ್ದಾಗ, ತಾಯಿ ಅಡುಗೆಮನೆಯಲ್ಲಿದ್ದಾಗ, ಅವನು ತನ್ನ ಕೋಣೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಈ ಸಂಬಂಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT