ಸಂಗ್ರಹ ಚಿತ್ರ 
ರಾಜ್ಯ

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿದೆ.

ಬೆಂಗಳೂರು: ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿದೆ.

ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಮತ್ತು ಎಂಎಲ್‌ಸಿ ಚಲುವಾದಿ ನಾರಾಯಣಸ್ವಾಮಿ ಅವರು ಸಿದ್ದರಾಮಯ್ಯ ದಲಿತ ವಿರೋಧಿ ಎಂದು ಕರೆದಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸರ್ಕಾರವು ಎಸ್‌ಸಿಎಸ್‌ಪಿ/ಟಿಎಸ್‌ಪಿ ನಿಧಿಯಿಂದ 11,000 ಕೋಟಿ ರೂ.ಗಳನ್ನು ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಳಸಬೇಕೇ ಹೊರತು ಉಚಿತ ಬಸ್ ಸೇವೆ ಅಥವಾ ವಿದ್ಯುತ್‌ಗೆ ಬಳಸಬಾರದು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸರ್ಕಾರ ನಾವು ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಲ್ಲ, ಬಿಜೆಪಿ ಆರೋಪ ನಿರಾಧಾರ. ಅನುದಾನವನ್ನು ಸಮುದಾಯಗಳ ಜನರ ಕಲ್ಯಾಣಕ್ಕಾಗಿ ಬಳಸಲಾಗುತ್ತಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!