ಹಾರಂಗಿ ಸೇತುವೆಯ ಮೇಲೆ ಸಂದೀಪ್(ಎಡದಿಂದ ಎರಡನೇಯವರು) ಹಾಗೂ ಸ್ನೇಹಿತರು ತೆಗೆದ ಸೆಲ್ಫಿ. 
ರಾಜ್ಯ

ಕೊಡಗು: ಸೆಲ್ಫಿ ತೆಗೆಯುವ ವೇಳೆ ನೀರಿಗೆ ಬಿದ್ದಿದ್ದ ಬೆಂಗಳೂರಿನ ವ್ಯಕ್ತಿಯ ಶವ ಪತ್ತೆ

ಕೊಡಗಿನ ಹಾರಂಗಿ ಜಲಾಶಯದ ಕೆಳಭಾಗದ ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ನೀರಿಗೆ ಬಿದ್ದಿದ್ದ ಬೆಂಗಳೂರಿನ ವ್ಯಕ್ತಿಯ ಶವ ಶುಕ್ರವಾರ ಪತ್ತೆಯಾಗಿದೆ. 

ಮಡಿಕೇರಿ: ಕೊಡಗಿನ ಹಾರಂಗಿ ಜಲಾಶಯದ ಕೆಳಭಾಗದ ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ನೀರಿಗೆ ಬಿದ್ದಿದ್ದ ಬೆಂಗಳೂರಿನ ವ್ಯಕ್ತಿಯ ಶವ ಶುಕ್ರವಾರ ಪತ್ತೆಯಾಗಿದೆ. 

ಬೆಂಗಳೂರಿನಿಂದ ಕೊಡಗಿಗೆ ಪ್ರವಾಸಕ್ಕೆ ತೆರಳಿದ್ದ ಟ್ಯಾಟೂ ಕಲಾವಿದ ಸಂದೀಪ್(46) ಅವರು ಗುರುವಾರ ಸಂಜೆ ಹಾರಂಗಿ-ಸೋಮವಾರಪೇಟೆ ಸೇತುವೆಯ ಮೇಲೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗ ನೀರಿಗೆ ಬಿದ್ದು ಮೃತಪಟ್ಟಿದ್ದರು. 

ಸಂದೀಪ್ ಪತ್ತೆಗಾಗಿ ಗುರುವಾರ ರಾತ್ರಿಯವರೆಗೂ ಶೋಧ ಕಾರ್ಯಾಚರಣೆ ಮುಂದುವರಿದಿತ್ತು. ಇಂದು ಬೆಳಗ್ಗೆ ಮತ್ತೆ ಶೋಧ ಕಾರ್ಯಾಚರಣೆ ಆರಂಭವಾಗಿತ್ತು. ಕುಶಾಲನಗರ ಪೊಲೀಸರ ಸಹಕಾರದೊಂದಿಗೆ ದುಬಾರೆ ರಾಫ್ಟಿಂಗ್ ತಂಡ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸಂದೀಪ್ ಮೃತದೇಹವನ್ನು ಹೊರ ತೆಗೆದಿದ್ದಾರೆ. ಘಟನೆ ನಡೆದ ಸ್ಥಳದ ಸಮೀಪವೇ ಮೃತದೇಹ ಪತ್ತೆಯಾಗಿದೆ.

ಪ್ರವಾಸಕ್ಕೆ ತೆರಳಿದ್ದ ಸಂದೀಪ್, ಗೋವಿಂದರಾಜು, ರಾಮ್‌ಕುಮಾರ್ ಮತ್ತು ರಂಜಿತ್ ಅವರು ಹಾರಂಗಿ ಸೇತುವೆಯ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ವೃತ್ತಿಯಲ್ಲಿ ಟ್ಯಾಟೂ ಕಲಾವಿದರಾಗಿರುವ ಸಂದೀಪ್(46) ಅವರು ಸೇತುವೆಯ ಅಂಚಿನಿಂದ ಸೆಲ್ಫಿ ಕ್ಲಿಕ್ಕಿಸಲು ಹೋಗಿ  ಜಾರಿ ನೀರಿಗೆ ಬಿದ್ದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT