ಸಾಂದರ್ಭಿಕ ಚಿತ್ರ 
ರಾಜ್ಯ

ಸೈಬರ್ ಕ್ರೈಂ ಆರೋಪಿಯಿಂದ ಸುಲಿಗೆ ಮಾಡುತ್ತಿದ್ದಾಗ ಕೇರಳದಲ್ಲಿ ಸಿಕ್ಕಿಬಿದ್ದ ನಾಲ್ವರು ಕರ್ನಾಟಕದ ಪೊಲೀಸರ ಅಮಾನತು!

ಸೈಬರ್ ವಂಚನೆ ಆರೋಪಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕರ್ನಾಟಕದ ನಾಲ್ವರು ಪೊಲೀಸರನ್ನು ಇಂದು ಅಮಾನತು ಮಾಡಲಾಗಿದೆ.

ಬೆಂಗಳೂರು: ಸೈಬರ್ ವಂಚನೆ ಆರೋಪಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕರ್ನಾಟಕದ ನಾಲ್ವರು ಪೊಲೀಸರನ್ನು ಇಂದು ಅಮಾನತು ಮಾಡಲಾಗಿದೆ.

ಈ ಸಂಬಂಧ ಎಸಿಪಿ ನೀಡಿದ ವರದಿ ಮೇರೆಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಅಮಾನತುಗೊಂಡ ಪೊಲೀಸರನ್ನು ಇನ್ಸ್ ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್ ಸ್ಟೇಬಲ್ ಗಳಾದ ವಿಜಯ್ ಕುಮಾರ್, ಶಿವಣ್ಣ ಮತ್ತು ಕಾನ್ ಸ್ಟೇಬಲ್ ಸಂದೇಶ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನ ಸೈಬರ್ ಕ್ರೈಮ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಉದ್ಯೋಗ ಕೊಡಿಸುವ ನೆಪದಲ್ಲಿ 26 ಲಕ್ಷ ರೂಪಾಯಿ ವಂಚಿಸಲಾಗಿದೆ ಎಂದು ಶ್ರೀಕಾಂತ್ ಎಂಬುವರು ಜೂನ್ 16ರಂದು ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಡಿಕೇರಿ ಮೂಲದ ಐಸಾಕ್ ಎಂಬಾತನ ಖಾತೆಗೆ ತನಿಖೆಯ ವೇಳೆ 10,000 ರೂ. ವರ್ಗಾವಣೆ ಆಗಿರುವುದು ತನಿಖೆ ವೇಳೆ ಪತ್ತೆಯಾಗಿತ್ತು. ಐಸಾಕ್​ ವಿಚಾರಣೆ ವೇಳೆ ಬ್ಯಾಂಕ್ ಖಾತೆಯನ್ನು ರಾಜೇಶ್ ಎಂಬಾತನ ಪರವಾಗಿ ತೆರೆಯಲಾಗಿದೆ ಎಂಬುದನ್ನು ಅರಿತ ಪೊಲೀಸರು ಆತನ ವಿಚಾರಣೆ ನಡೆಸಿದ್ದರು. ಈ ವೇಳೆ ಕೇರಳದ ನೌಶಾದ್‌ನ ಹೆಸರು ಹೊರಬಂದಿತ್ತು.

ಹೀಗಾಗಿ ಆರೋಪಿ ಪೊಲೀಸ್ ತಂಡ ಕೇರಳದ ಕಲ್ಲೇಂಚೇರಿಗೆ ತೆರಳಿ ನೌಶಾದ್ ನನ್ನು ವಶಕ್ಕೆ ಪಡೆದು 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಹಣ ನೀಡಲು ವಿಫಲವಾದರೆ ಕ್ರಿಪ್ಟೋ ಕರೆನ್ಸಿ ಪ್ರಕರಣದಲ್ಲಿ ಫಿಕ್ಸ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ನೌಶಾದ್ ಕರ್ನಾಟಕ ಪೊಲೀಸರ ವಿರುದ್ಧ ಕಲಮಶ್ಶೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನೌಶಾದ್ ಆರೋಪ ಕರ್ನಾಟಕ ಪೊಲೀಸ್ ಇಲಾಖೆಯನ್ನು ದೊಡ್ಡ ಮುಜುಗರದ ಪರಿಸ್ಥಿತಿಗೆ ತಂದಿತ್ತು. ಬೆಂಗಳೂರು ಪೊಲೀಸ್ ಕಮಿಷನರೇಟ್ ಎಸಿಪಿ ಶ್ರೇಣಿಯ ಅಧಿಕಾರಿಯನ್ನು ಕೇರಳಕ್ಕೆ ತನಿಖೆ ಮತ್ತು ವಿವರಗಳನ್ನು ಖಚಿತಪಡಿಸಿಕೊಳ್ಳಲು ಕಳುಹಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT