ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್‌ 
ರಾಜ್ಯ

ಏರ್ ಏಷ್ಯಾ ವಿರುದ್ಧ ದಾಖಲಿಸಿದ್ದ ದೂರು ವಾಪಸ್ ಪಡೆದ ರಾಜ್ಯಪಾಲರ ಕಚೇರಿ!

ತಡವಾಗಿ ಬಂದರು ಎಂಬ ಕಾರಣಕ್ಕಾಗಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಬಿಟ್ಟು ತೆರಳಿದ್ದ ಏರ್ ಏಷ್ಯಾ ವಿಮಾನ ಸಂಸ್ಥೆಯ ಹಾಗೂ ಅದರ ಇಬ್ಬರು ಸಿಬ್ಬಂದಿಗಳ ವಿರುದ್ಧ ದಾಖಲಿಸಿದ್ದ ದೂರನ್ನು ರಾಜ್ಯಪಾಲರ ಕಚೇರಿ ಹಿಂಪಡೆದುಕೊಂಡಿದೆ.

ಬೆಂಗಳೂರು: ತಡವಾಗಿ ಬಂದರು ಎಂಬ ಕಾರಣಕ್ಕಾಗಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಬಿಟ್ಟು ತೆರಳಿದ್ದ ಏರ್ ಏಷ್ಯಾ ವಿಮಾನ ಸಂಸ್ಥೆಯ ಹಾಗೂ ಅದರ ಇಬ್ಬರು ಸಿಬ್ಬಂದಿಗಳ ವಿರುದ್ಧ ದಾಖಲಿಸಿದ್ದ ದೂರನ್ನು ರಾಜ್ಯಪಾಲರ ಕಚೇರಿ ಹಿಂಪಡೆದುಕೊಂಡಿದೆ.

ರಾಜ್ಯಪಾಲರನ್ನು ಬಿಟ್ಟು ತೆರಳಿದ್ದ ಹಿನ್ನೆಲೆಯಲ್ಲಿ ಸಂಸ್ಥೆ ವಿರುದ್ಧ ರಾಜಭವನ ದೂರು ದಾಖಲಿಸಿದ್ದು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಏರ್‍ಏಷ್ಯಾ ಸಂಸ್ಥೆ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನನಿಲ್ದಾಣದ ಸ್ಟೇಷನ್ ಮ್ಯಾನೇಜರ್ ಹಾಗೂ ಇತರೆ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಸೇವೆಯಿಂದ ಅಮಾನತುಗೊಳಿಸಿತ್ತು.

ಈ ನಡುವಲ್ಲೇ ವಿಮಾನಯಾನ ಅಧಿಕಾರಿಯೊಬ್ಬ ಪತ್ರವೊಂದನ್ನು ಬರೆದು, ಕ್ಷಮೆಯಾಚಿಸಿದ್ದರು. ಈ ಎಲ್ಲಾ ಬೆಳವಣಿಗೆ ನಡುವಲ್ಲೇ ದೂರು ಹಿಂಪಡೆದುಕೊಳ್ಳಲು ರಾಜ್ಯಪಾಲರು ನಿರ್ಧರಿಸಿದ್ದಾರೆ.

ಯಾವುದೇ ವ್ಯಕ್ತಿಯ ಉದ್ಯೋಗ ನಷ್ಟವಾಗುವುದನ್ನು ನಾವು ಬಯಸುವುದಿಲ್ಲ. ಈ ವಿಚಾರವನ್ನು ಮುಂದುವರೆಸಲು ರಾಜ್ಯಪಾಲರು ಬಯಸುವುದಿಲ್ಲ. ಹೀಗಾಗಿ ದೂರು ಹಿಂಪಡೆಯಲು ನಿರ್ಧರಿಸಿದ್ದಾರೆಂದು ರಾಜ್ಯಪಾಲರ ಕಚೇರಿ ಮೌಖಿಕವಾಗಿ ತಿಳಿಸಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಈ ನಡುವೆ ಪ್ರಕರಣ ಸಂಬಂಧ ಏರ್ ಏಷ್ಯಾ ಇಂಡಿಯಾ ಆಂತರಿಕ ತನಿಖೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ರಾಜ್ಯಪಾಲರನ್ನು ಬಿಟ್ಟು ಹಾರಿದ್ದ ವಿಮಾನಯಾನ ಸಂಸ್ಥೆಯ ವಿರುದ್ಧ ರಾಜ್ಯಪಾಲರ ಕಚೇರಿ ಶಿಷ್ಟಾಚಾರ ಉಲ್ಲಂಘನೆ ದೂರು ದಾಖಲಿಸಿತ್ತು. ರಾಜ್ಯಪಾಲರ ಶಿಷ್ಟಾಚಾರದ ಅಧಿಕಾರಿ ಎಂ.ವೇಣುಗೋಪಾಲ್ ಅವರು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT