ಒಪಿಡಿಯಲ್ಲಿ ಕಾದು ಕುಳಿತಿರುವ ಜನತೆ. 
ರಾಜ್ಯ

ಬೆಂಗಳೂರು: ಹೊರರೋಗಿ ವಿಭಾಗಕ್ಕೆಂದೇ 4 ಅಂತಸ್ತಿನ ನೂತನ ಕಟ್ಟಡ ನಿರ್ಮಾಣಕ್ಕೆ ನಿಮ್ಹಾನ್ಸ್ ಮುಂದು!

ವೈದ್ಯರ ಭೇಟಿ ಮಾಡಬೇಕೆಂದರೆ ಬೆಳಿಗ್ಗೆ 4 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಟೋಕಲ್ ಪಡೆದು ಕಾಯುತ್ತಿದ್ದ ಹೊರರೋಗಿಗಳ ಸಮಸ್ಯೆ ದೂರಾಗಿಸಲು ನಿಮ್ಹಾನ್ಸ್‌ ಆಸ್ಪತ್ರೆ ಮುಂದಾಗಿದೆ.

ಬೆಂಗಳೂರು: ವೈದ್ಯರ ಭೇಟಿ ಮಾಡಬೇಕೆಂದರೆ ಬೆಳಿಗ್ಗೆ 4 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಟೋಕಲ್ ಪಡೆದು ಕಾಯುತ್ತಿದ್ದ ಹೊರರೋಗಿಗಳ ಸಮಸ್ಯೆ ದೂರಾಗಿಸಲು ನಿಮ್ಹಾನ್ಸ್‌ ಆಸ್ಪತ್ರೆ ಮುಂದಾಗಿದೆ.

ಹೊರರೋಗಿಗಳ ವಿಭಾಗಕ್ಕೆಂದೇ ನಿಮ್ಹಾನ್ಸ್ 4 ಅಂತಸ್ತಿನ ಹೊಸ ಕಟ್ಟಡವನ್ನು ನಿರ್ಮಾಣ ಮಾಡಲು ನಿರ್ಧರಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮ್ಹಾನ್ಸ್‌ನ ನಿರ್ದೇಶಕಿ ಡಾ ಪ್ರತಿಮಾ ಮೂರ್ತಿ ಅವರು, ನೂತನ ಕಟ್ಟಡಕ್ಕೆ 280 ಕೋಟಿ ರೂ.ವರೆಗೆ ವೆಚ್ಚವಾಗಬಹುದು. ಕಟ್ಟಡ ನಿರ್ಮಾಣದ ಧನಸಹಾಯಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. 1990ರ ದಶಕದಲ್ಲಿ ಆಸ್ಪತ್ರೆಗೆ 400-500 ರೋಗಿಗಳು ಭೇಟಿ ನೀಡುತ್ತಿದ್ದರು. ಆದರೀಗ ಈ ಸಂಖ್ಯೆ ದುಪ್ಪಟ್ಟಾಗಿದೆ. ಹೊರರೋಗಿಗಳ ವಿಭಾಗಕ್ಕೇ ಪ್ರತೀದಿನ 2,000-2,500 ಜನರು ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಹೊರರೋಗಿ ವಿಭಾಗಕ್ಕೆ ಪ್ರತ್ಯೇಕ ಕಟ್ಟಡದ ಅಗತ್ಯವಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಇರುವ ಒಪಿಡಿ ಹಿಂದೆಯೇ ನೂತನ ಒಪಿಡಿ ಕಟ್ಟಡವನ್ನು ನಿರ್ಮಾಣ ಮಾಡಲಾಗುವುದು. ನಂತರ ಹಳೆಯ ಒಪಿಡಿಯನ್ನು ಮುಚ್ಚಲಾಗುತ್ತದೆ. ಇಲ್ಲಿರುವ ಸಿಬ್ಬಂದಿ ಹಾಗೂ ವೈದ್ಯಕೀಯ ಉಪಕರಣಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಪ್ರಸ್ತುತದ ಒಪಿಡಿ ವಿಭಾಗವನ್ನು ಸುಂದರವಾದ ಉದ್ಯಾನವನ್ನಾಗಿ ಪರಿವರ್ತಿಸುವ ಚಿಂತನೆಗಳಿವೆ ಎಂದು ತಿಳಿಸಿದ್ದಾರೆ.

ಚಿಕಿತ್ಸೆ ಪಡೆಯಲು ದೂರದ ಪಟ್ಟಣಗಳಿಂದ ಆಸ್ಪತ್ರೆಗೆ ಬರುತ್ತಾರೆ. ಕಾಯಲು ಆರಾಮದಾಯಕ ವಾತಾವರಣ, ಆವರಣದ ಅಗತ್ಯವಿರುತ್ತದೆ. ಇದರಿಂದ ಅವರ ಒತ್ತಡ ಮಟ್ಟ ಕೂಡ ಕಡಿಮೆಯಾಗುವಂತೆ ಮಾಡುತ್ತದೆ ಎಂದಿದ್ದಾರೆ.

ರೋಗಿಗಳ ಕಾಯುವ ಅವಧಿಯನ್ನು ಸುಧಾರಿಸಲು ನಿಮ್ಹಾನ್ಸ್ ಈಗಾಗಲೇ ಕ್ರಮಗಳನ್ನು ಕೈಗೊಂಡಿದೆ. ವಯಸ್ಸಾದವರಿಗೆ, ಗರ್ಭಿಣಿಯರಿಗೆ ಮತ್ತು ಮಕ್ಕಳಿರುವವರಿಗೆ ಪ್ರತ್ಯೇಕ ಸರತಿ ಸಾಲುಗಳನ್ನು ಪ್ರಾರಂಭಿಸಿದ್ದೇವೆ, ಇದು ಅವರಿಗೆ ಸಾಕಷ್ಟು ಸಹಾಯ ಮಾಡಿದೆ" ಎಂದು ಹಿರಿಯ ಮನೋವೈದ್ಯಶಾಸ್ತ್ರದ ಪ್ರಾಧ್ಯಾಪಕರು ಹೇಳಿದ್ದಾರೆ.

ರೋಗಿಗಳ ಪ್ರತಿಕ್ರಿಯೆಗಾಗಿ ಸಮೀಕ್ಷೆ ನಡೆಸಲಾಗಿತ್ತು. ಈವೇಳೆ ಹಲವರು ಕಾಯುವ ಅವಧಿ ಹಾಗೂ ಹಣ ನೀಡುವಂತೆ ಸಿಬ್ಬಂದಿಗಳು ಒತ್ತಾಯಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT