ವಿಶ್ವನಾಥ್ ಪುತ್ರ ಅಮಿತ್ 
ರಾಜ್ಯ

ಮಾಡಿದ್ದು ಒಂದೇ ಒಂದು ಕಾಲ್, ಹೋಗಿದ್ದು ಬರೊಬ್ಬರಿ 1.99 ಲಕ್ಷ ರೂ.: ಹಣ ಕಳೆದುಕೊಂಡ ಎಂಎಲ್ ಸಿ ಹೆಚ್. ವಿಶ್ವನಾಥ್ ಪುತ್ರ!

ಎಟಿಎಂಗೆ ಹೋಗಿದ್ದ ವೇಳೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರ ಪುತ್ರನಿಗೆ ಆನ್ ಲೈನ್ ಮೂಲಕ ವಂಚಿಸಲಾಗಿದೆ.

ಮೈಸೂರು: ಎಟಿಎಂಗೆ ಹೋಗಿದ್ದ ವೇಳೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರ ಪುತ್ರನಿಗೆ ಆನ್ಲೈನ್ ಮೂಲಕ ವಂಚಿಸಲಾಗಿದೆ.

ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ವಂಚನೆಗೊಳಗಾದವರು. ಆನ್‌ಲೈನ್ ವಂಚನೆಯ ಜಾಲಕ್ಕೆ ಓರ್ವ ಎಂಎಲ್‌ಸಿ ಎಚ್ ವಿಶ್ವನಾಥ್ ಪುತ್ರ ಅಮಿತ್ ಸಿಲುಕಿದ್ದು, ಬರೊಬ್ಬರಿ 1.99 ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ. ಬಳಿಕ ಕೂಡಲೇ ಸೈಬರ್ ಠಾಣೆಗೆ ಕರೆ ಮಾಡಿ ದೂರು ನೀಡಿದ್ದಾರೆ.

ಹಣ ಡ್ರಾ ಮಾಡಲು ಅಮಿತ್ ದೇವರಹಟ್ಟಿ ಎಟಿಎಂಗೆ ಹೋಗಿದ್ದು, ಹಣ ಬಾರದ ಕಾರಣ ಕಸ್ಟಮರ್ ಕೇರ್ ನಂಬರ್ ಗೆ ಕರೆ ಮಾಡಿದ್ದಾರೆ. ಗೂಗಲ್ ನಲ್ಲಿ ನಂಬರ್ ಹುಡುಕಿ ಅಮಿತ್ ಕರೆ ಮಾಡಿದ್ದು, ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿ ವಂಚಿಸಿದ್ದಾನೆ. ಅಮಿತ್ ಅವರ ಬ್ಯಾಂಕ್ ಖಾತೆಯ ವಿವರ ಪಡೆದು ವಂಚಿಸಿದ್ದಾನೆ. ಈ ಬಗ್ಗೆ ಅಮಿತ್ ದೇವರಹಟ್ಟಿ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ಆನ್​ಲೈನ್​ ವಂಚನೆ(Online Fraud) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಎಷ್ಟೇ ವಂಚನೆ ಪ್ರಕರಣಗಳು ಬೆಳಕಿಗೆ ಬಂದರೂ, ಜನಸಾಮಾನ್ಯರು ಮಾತ್ರ ಇಂತಹವರ ಬಲೆಗೆ ಬೀಳುವುದು ಮಾತ್ರ ತಪ್ಪುತ್ತಿಲ್ಲ. ಮುಖ್ಯವಾಗಿ ಶಿಕ್ಷಣವಂತರೇ ಇಂತಹವರ ಗಾಳಕ್ಕೆ ಬಿದ್ದು, ಹಣ ಕಳೆದುಕೊಳ್ಳುತ್ತಿರುವುದು ದುರಾದೃಷ್ಟ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT