ತಿಪ್ಪೇಸ್ವಾಮಿ 
ರಾಜ್ಯ

ಚಿತ್ರದುರ್ಗ: ಬಿಜೆಪಿ ಶಾಸಕ ಚಂದ್ರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯಿತಿ ನೌಕರ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕ(ಎಸ್​ಡಿಎ) ತಿಪ್ಪೇಸ್ವಾಮಿ ಅವರು ಹೊಳಲ್ಕೆರೆ ಬಿಜೆಪಿ ಶಾಸಕ ಎಂ. ಚಂದ್ರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ...

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕ(ಎಸ್​ಡಿಎ) ತಿಪ್ಪೇಸ್ವಾಮಿ ಅವರು ಹೊಳಲ್ಕೆರೆ ಬಿಜೆಪಿ ಶಾಸಕ ಎಂ. ಚಂದ್ರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. 

ತಿಪ್ಪೇಸ್ವಾಮಿ ಅವರು ನಿನ್ನೆ ಹೊಸದುರ್ಗ ತಾಲೂಕಿನ ಜಾನಕಲ್ ಬಳಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಸಕ ಎಂ.ಚಂದ್ರಪ್ಪ ಅವರ ಅಮಾನತು ಬೆದರಿಕೆ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಪ್ಪೇಸ್ವಾಮಿ ಅವರು ಡೆತ್​ನೋಟ್​ನಲ್ಲಿ ಬರೆದಿಟ್ಟಿದ್ದಾರೆ.

ಈ ಸಂಬಂಧ ಮೃತ ತಿಪ್ಪೇಸ್ವಾಮಿ ಪುತ್ರ ರಾಜಶೇಖರಪ್ಪ ಎನ್ನುವರು ಹೊಸದುರ್ಗ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಆದರೆ ದೂರಿನಲ್ಲಿ ಶಾಸಕ ಎಂ.ಚಂದ್ರಪ್ಪ, ತಾಲೂಕು ಪಂಚಾಯಿತಿ ಇಓ ರವಿ ಹೆಸರು ಉಲ್ಲೇಖವಿಲ್ಲ. ಸ್ವತಃ ತಿಪ್ಪೇಸ್ವಾಮಿಯೇ ನಿರ್ದಿಷ್ಟವಾಗಿ ಶಾಸಕರ ಹೆಸರು ಬರೆದಿಟ್ಟ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ಇದೀಗ ದೂರಿನಲ್ಲಿ ಅವರ ಹೆಸರು ಇಲ್ಲದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಈ ಮೂಲಕ ಎಲ್ಲರಿಗೂ ಕೊನೆಯ ಶಭಾಶಯಗಳು. ಪತ್ರ ಬರೆದ ಉದ್ದೇಶವೆನೆಂದರೆ ನಾನು ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದ್ವಿತಿಯ ದರ್ಜೆ ಸಹಾಯಕನಾಗಿ ಕೆಲಸ ನಿರ್ವಹಿಸುತ್ತಿದ್ದೆ. ನಾನು ಸಾಯಲು ಕಾರಣವೇನೆಂದೆರೆ ಪಂಚಾಯಿತಿಯಲ್ಲಿ ಬಹಳ ಕಿರುಕುಳ ನೀಡುತ್ತಿದ್ದರು. ದಿನಾಂಕ 3-8-2023ರಂದು ಎಂಎಲ್​ಎ ಚಂದ್ರಪ್ಪನವರು, ನಿನ್ನನ್ನು ಅಮಾನತು ಮಾಡುಸುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಇಓ ರವಿ ಅವರು ಹಿಂಸೆ ಕೊಡುತ್ತಿದ್ದರು. ಅಲ್ಲದೇ ಗ್ರಾಮ ಪಂಚಾಯಿತಿ ಸದಸ್ಯರಾದ ಮೋಹನ್, ಮೂರ್ತಿ, ಉಗ್ರಪ್ಪ, ಲವ, ರಾಜಪ್ಪ ಕಿರುಕುಳ ನೀಡುತ್ತಿದ್ದಿದ್ದು, ನನ್ನ ಸಾವಿಗೆ ಮೇಲೆ ತಿಳಿಸಿರುವ ಎಲ್ಲರೂ ಕಾರಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ದೂರಿನಲ್ಲಿ ಶಾಸಕ ಎಂ.ಚಂದ್ರಪ್ಪ, ತಾ.ಪಂ ಇಓ ರವಿ ಹೆಸರು ಉಲ್ಲೇಖವಿಲ್ಲ. ಕೇವಲ ಗ್ರಾಮ ಪಂಚಾಯಿತಿ ಸದಸ್ಯರಾದ ಮೋಹನ್, ಮೂರ್ತಿ, ಉಗ್ರಪ್ಪ, ಲವ, ರಾಜಪ್ಪ ಎಂಬುವರ ವಿರುದ್ಧ ಕಿರುಕುಳ ದೂರು ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಪ್ಸ್ಟೀನ್ ದಾಖಲೆಗಳ ಉಲ್ಲೇಖ, ಹರ್ದೀಪ್ ಪುರಿ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ: ಮಾರ್ಚ್ 9 ರವರೆಗೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

ಬಾಂಗ್ಲಾದೇಶ ಚುನಾವಣೆಯಲ್ಲಿ BNP ಭರ್ಜರಿ ಗೆಲುವು: ತಾರಿಕ್ ರೆಹಮಾನ್ ಗೆ ಪ್ರಧಾನಿ ಮೋದಿ ಅಭಿನಂದನೆ; ಹೇಳಿದ್ದೇನು?

T20 WC: 19 ವರ್ಷಗಳ ನಂತರ ಆಸೀಸ್ ಅನ್ನು ಸೋಲಿಸಿ ಜಿಂಬಾಬ್ವೆ ಮತ್ತೆ ಇತಿಹಾಸ ಸೃಷ್ಟಿ: 3ನೇ ಸ್ಥಾನಕ್ಕೆ ಕುಸಿದ Australia!

ಅಣೆಕಟ್ಟು ಸುರಕ್ಷತೆಯಲ್ಲಿ ಕರ್ನಾಟಕ ದೇಶಕ್ಕೆ ಮಾದರಿ; ಕೇಂದ್ರ ಅನುಮತಿ ಕೊಟ್ಟರೆ ಮೇಕೆದಾಟು, UKP ಯೋಜನೆ ಜಾರಿ: ಡಿ.ಕೆ ಶಿವಕುಮಾರ್

ಮಹಾ ಶಿವರಾತ್ರಿ ಮಹತ್ವ: ಆಧ್ಯಾತ್ಮಿಕ ಶುದ್ಧೀಕರಣ, ಪಾಪಗಳ ನಿವಾರಣೆ; ಕಡ್ಡಾಯವಾಗಿ ಮಾಡಿ ಉಪವಾಸ- ಜಾಗರಣೆ, ಪಂಚಾಕ್ಷರಿ ಮಂತ್ರ ಪಠಣೆ!

SCROLL FOR NEXT