ಜೈನ ಸನ್ಯಾಸಿ ಹತ್ಯೆ ಪ್ರಕರಣ: ನಂದಿ ಆಶ್ರಮಕ್ಕೆ ಸಿಐಡಿ ಉನ್ನತಾಧಿಕಾರಿ ಭೇಟಿ ಜೈನ್ ಸನ್ಯಾಸಿ ಹತ್ಯೆ ಪ್ರಕರಣ: ನಂದಿ ಆಶ್ರಮಕ್ಕೆ ಸಿಐಡಿ ಉನ್ನತಾಧಿಕಾರಿ ಭೇಟಿ ಎಕ್ಸ್‌ಪ್ರೆಸ್ ಸುದ್ದಿ ಸೇವೆ @ ಬೆಳಗಾವಿ ಜೈನ ಸನ್ಯಾಸಿ, ನಂದಿಪರ್ವತದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿಜಿ 
ರಾಜ್ಯ

ಜೈನ ಮುನಿ ಹತ್ಯೆ ಪ್ರಕರಣ: ನಂದಿ ಆಶ್ರಮಕ್ಕೆ ಸಿಐಡಿ ಉನ್ನತಾಧಿಕಾರಿ ಭೇಟಿ, ಪರಿಶೀಲನೆ

ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಐಡಿ ಡಿಜಿಪಿ ಎಂ.ಎ.ಸಲೀಮ್‌ ಅವರು, ಹಿರೇಕೋಡಿಯ ನಂದಿಪರ್ವತ ಆಶ್ರಮ, ರಾಯಬಾಗ ತಾಲ್ಲೂಕಿನ ಖಟಕಬಾವಿ ಮತ್ತು ಮಾವಿನಹೊಂಡಕ್ಕೆ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೆಳಗಾವಿ: ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಐಡಿ ಡಿಜಿಪಿ ಎಂ.ಎ.ಸಲೀಮ್‌ ಅವರು, ಹಿರೇಕೋಡಿಯ ನಂದಿಪರ್ವತ ಆಶ್ರಮ, ರಾಯಬಾಗ ತಾಲ್ಲೂಕಿನ ಖಟಕಬಾವಿ ಮತ್ತು ಮಾವಿನಹೊಂಡಕ್ಕೆ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕಾಮಕುಮಾರ ನಂದಿ ಮಹಾರಾಜರು ತಂಗಿದ್ದ ಆಶ್ರಮದ ಕೊಠಡಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸ್ಥಳೀಯರು ಹಾಗೂ ತನಿಖಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಜುಲೈ 5 ರಂದು ಜೈನ ಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆ ಬಳಿಕ ದೇಹವನ್ನು ತುಂಡು ತುಂಡಾಗಿ ಕತ್ತರಿಸಲಾಗಿದ್ದು, ಈ ಭಾಗಗಳು ಬೋರ್‌ವೆಲ್‌ನಲ್ಲಿ ಪತ್ತೆಯಾಗಿತ್ತು.

ಈ ಬಗ್ಗೆ ಕ್ಷಿಪ್ರ ತನಿಖೆ ನಡೆಸಿದ ಬೆಳಗಾವಿ ಜಿಲ್ಲಾ ಪೊಲೀಸರು, ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ರಾಜ್ಯಾದ್ಯಂತ ಹಲವು ಸಂಘಟನೆಗಳು ಮತ್ತು ರಾಜಕೀಯ ಮುಖಂಡರು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದರಿಂದ, ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸರ್ಕಾರವು ಸಿಐಡಿ ತನಿಖೆಗೆ ಹಸ್ತಾಂತರಿಸಿತ್ತು.

ಕಳೆದ ಕೆಲವು ವಾರಗಳಿಂದ ತನಿಖೆಯ ಭಾಗವಾಗಿ ಸಿಐಡಿ ತಂಡಗಳು ಹಿರೇಕುಡಿಯ ಆಶ್ರಮ ಮತ್ತು ಅಪರಾಧ ನಡೆದ ಸ್ಥಳಗಳಿಗೆ ಪದೇ ಪದೇ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿವೆ. ಇದರಂತೆ ಶನಿವಾರ (ಆ.5) ಸಿಐಡಿ ಡಿಜಿಪಿ ಡಾ.ಸಲೀಂ ಮತ್ತು ಅವರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿತು.

ಈ ಸಂದರ್ಭದಲ್ಲಿ ಸಿಐಡಿ ಐಜಿ ಮಧುಕರ ಪವಾರ್, ಸಿಐಡಿ ಎಸ್ಪಿ ವೆಂಕಟೇಶ್ ಕುಮಾರ್, ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT