ಬಿಡಿಎ ಸಾಂದರ್ಭಿಕ ಚಿತ್ರ 
ರಾಜ್ಯ

ವಿಲ್ಲಾ ಮಾಲಿಕನಿಗೆ ಕಾರು ನಿಲುಗಡೆ ಹಣ ಪಾವತಿಸಲಿರುವ ಬಿಡಿಎ

ಸೇವೆಯಲ್ಲಿನ ಕೊರತೆ ಹಾಗೂ ಅನ್ಯಾಯದ ವ್ಯಾಪಾರ ಪದ್ಧತಿಗೆ ಬಿಡಿಎಯನ್ನು ಹೊಣೆ ಮಾಡಿರುವ ಬೆಂಗಳೂರಿನ ಹೆಚ್ಚುವರಿ ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ವಿಲ್ಲಾ ಮಾಲಿಕರೊಬ್ಬರಿಗೆ 2 ಲಕ್ಷ ರೂಪಾಯಿಗಳನ್ನು ಪಾವತಿಸುವಂತೆ ಸೂಚನೆ ನೀಡಿದೆ. 

ಬೆಂಗಳೂರು: ಸೇವೆಯಲ್ಲಿನ ಕೊರತೆ ಹಾಗೂ ಅನ್ಯಾಯದ ವ್ಯಾಪಾರ ಪದ್ಧತಿಗೆ ಬಿಡಿಎಯನ್ನು ಹೊಣೆ ಮಾಡಿರುವ ಬೆಂಗಳೂರಿನ ಹೆಚ್ಚುವರಿ ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ವಿಲ್ಲಾ ಮಾಲಿಕರೊಬ್ಬರಿಗೆ 2 ಲಕ್ಷ ರೂಪಾಯಿಗಳನ್ನು ಪಾವತಿಸುವಂತೆ ಸೂಚನೆ ನೀಡಿದೆ. 

ವಿಲ್ಲಾ ಹಂಚಿಕೆಯಾದ ಬಳಿಕ 2 ಲಕ್ಷ ರೂಪಾಯಿಗಳನ್ನು ಕಾರು ಪಾರ್ಕಿಂಗ್ ಗಾಗಿ ಪಡೆಯಲಾಗಿತ್ತು. ಈ ಹಣವನ್ನು ಹಿಂತಿರುಗಿಸಿ 10,000  ರೂಪಾಯಿಗಳ ದಾವೆ ವೆಚ್ಚಗಳನ್ನೂ ಭರಿಸುವಂತೆ ಆಯೋಗ ಬಿಡಿಎ ಗೆ ಸೂಚನೆ ನೀಡಿದೆ.

ಆಯೋಗದ ಅಧ್ಯಕ್ಷರಾಗಿರುವ ಶಿವರಾಮ ಕೆ, ಚಂದ್ರಶೇಖರ್ ಎಸ್ ನೂಲಾ ಹಾಗೂ ರೇಖಾ ಸಾಯಣ್ಣವರ್ ಈ ಆದೇಶವಿತ್ತಿದ್ದು, ಅಪೂರ್ವ ಎಂಬುವವರು ದೂರು ದಾಖಲಿಸಿದ್ದರು.  

2017 ರ ಆಗಸ್ಟ್ 24 ರ ಹಂಚಿಕೆ ಪತ್ರದಲ್ಲಿ ಎಲ್ಲಿಯೂ ಕಾರು ನಿಲ್ದಾಣಕ್ಕಾಗಿ ಪ್ರತ್ಯೇಕ ಶುಲ್ಕದ ಬಗ್ಗೆ ಮಾಹಿತಿ ಇಲ್ಲ. ಆದರೆ 2017 ರ ನವೆಂಬರ್ 3 ರಂದು ಬಿಡಿಎ ಆಯುಕ್ತರು ಪ್ರತ್ಯೇಕ ಅಧಿಸೂಚನೆ ಹೊರಡಿಸಿ ಪಾರ್ಕಿಂಗ್ ಸ್ಲಾಟ್‌ಗಳ ಬಗ್ಗೆ ಮಾಹಿತಿಯನ್ನು ವಿವರವಾಗಿ ನೀಡಿದ್ದರು ಇದು ಅನ್ಯಾಯ ಎಂದು ಆಯೋಗ ಹೇಳಿದೆ.

ಬಿಡಿಎ ಉದ್ದೇಶ ವಿಲ್ಲಾಗಳಿಗೆ ಲಭ್ಯವಿರುವ ಮುಚ್ಚಿದ ಕಾರ್ ಪಾರ್ಕಿಂಗ್ ಸ್ಲಾಟ್‌ಗಳನ್ನು ಹಂಚಿಕೆ ಮಾಡುವುದಾಗಿತ್ತು. ಆದರೆ ಇದರ ಬಗ್ಗೆ ಪೂರ್ಣ ಮಾಹಿತಿಯನ್ನು  ಹಂಚಿಕೆ ಮಾಡುವ ಸಮಯದಲ್ಲಿ ಅಥವಾ ಅದಕ್ಕಿಂತಲೂ ಮುಂಚೆ ನೀಡಿರಲಿಲ್ಲ.  ಯಾವುದೇ ಶುಲ್ಕವನ್ನು ವಿಧಿಸುವ ಅಥವಾ ಹಣದ ಮೊತ್ತವನ್ನು ಗ್ರಾಹಕರು ಪಾವತಿಸುವ ಬಗ್ಗೆ  ಪ್ರಾರಂಭಿಕ ಹಂತದಲ್ಲೇ ಮಾಹಿತಿ ನೀಡುವುದು ಬಿಡಿಎಯ ಜವಾಬ್ದಾರಿಯಾಗಿರುತ್ತದೆ ಎಂದು ಆಯೋಗ ಹೇಳಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT