ಸಾಂದರ್ಭಿಕ ಚಿತ್ರ 
ರಾಜ್ಯ

ಕೆಆರ್ ಎಸ್ , ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ಹರಿದ ಕಾವೇರಿ, ಕೆರಳಿದ ರೈತರು!

ನೀರಾವರಿ ಇಲಾಖೆ ಕೆಆರ್‌ಎಸ್ ಮತ್ತು ಕಬಿನಿ  ಜಲಾಶಯಗಳ ಜಲಾನಯನ ಪ್ರದೇಶಕ್ಕೆ ನೀರು ಬಿಡುವುದರ ಬದಲು ತಮಿಳುನಾಡಿಗೆ ಹರಿಸಿದೆ. ಇದರಿಂದ  ಕೆರಳಿರುವ ರೈತರು ಈ ನಿರ್ಧಾರ ತಮ್ಮ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು: ನೀರಾವರಿ ಇಲಾಖೆ ಕೆಆರ್‌ಎಸ್ ಮತ್ತು ಕಬಿನಿ  ಜಲಾಶಯಗಳ ಜಲಾನಯನ ಪ್ರದೇಶಕ್ಕೆ ನೀರು ಬಿಡುವುದರ ಬದಲು ತಮಿಳುನಾಡಿಗೆ ಹರಿಸಿದೆ. ಇದರಿಂದ  ಕೆರಳಿರುವ ರೈತರು ಈ ನಿರ್ಧಾರ ತಮ್ಮ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಆರ್ ಎಸ್ ಜಲಾಶಯಕ್ಕೆ 5,270 ಕ್ಯೂಸೆಕ್ ಒಳಹರಿವು ದಾಖಲಾಗಿದ್ದರಿಂದ ಅಧಿಕಾರಿಗಳು 5,356 ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿದ್ದಾರೆ. ಕಳೆದ ವರ್ಷ ಇದೇ ಅವಧಿಯಲ್ಲಿ  46 ಟಿಎಂಸಿ ಅಡಿ ನೀರು ಜಲಾಶಯದಲ್ಲಿ ದಾಖಲಾಗಿತ್ತು. ಈಗ 35.235 ಟಿಎಂಸಿ ಅಡಿ ಇದೆ. ಎರಡು ಜಲಾಶಯಗಳ ಜಲಾನಯನ ಪ್ರದೇಶಗಳಾದ ಕೊಡಗು ಹಾಗೂ ಕೇರಳದ ವೈನಾಡು ಪ್ರದೇಶದಲ್ಲಿ ಮುಂಗಾರು ದುರ್ಬಲವಾಗಿರುವ ಸಂದರ್ಭದಲ್ಲಿ ನೀರು ಬಿಡುವ ನಿರ್ಧಾರ ಕೈಗೊಳ್ಳಲಾಗಿದೆ.

ಒಳಹರಿವಿನ ಕೊರತೆಯಿಂದಾಗಿ ರಾಜ್ಯದ ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳು ಇನ್ನೂ ಭರ್ತಿಯಾಗಿಲ್ಲ. ಇದೇ ಕಾರಣಕ್ಕೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಕರ್ನಾಟಕ ವಿಳಂಬವಾಗುತ್ತಿದೆ.

ಈ ಮಧ್ಯೆ ತಮಿಳುನಾಡು ಸರ್ಕಾರವು ಮಧ್ಯಪ್ರವೇಶಿಸಿ ಕಾವೇರಿ ನೀರಿನ ಪಾಲನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ಕಚೇರಿಗೆ ಪತ್ರ ಬರೆದಿದೆ. ರಾಜ್ಯದ ಕಾವೇರಿ ಜಲಾನಯನ ಪ್ರದೇಶದಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ನೀರು ಬಿಡುವ ಕುರಿತು ಬುಧವಾರ ನೀರಾವರಿ ಸಮಾಲೋಚನಾ ಸಮಿತಿ ಸಭೆ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕೂಡಲೇ ಕಾಲುವೆಗಳಿಗೆ ನೀರು ಬಿಡಿ: ಕುರುಬೂರು

ನೀರು ಬಿಡಬೇಕೆಂಬ ರೈತರ ಬೇಡಿಕೆಗೆ ಅಧಿಕಾರಿಗಳು ಮೌನವಹಿಸಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ  ರಾಜ್ಯ ಕಬ್ಬು ಬೆಳೆಗಾರರ ​​ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರೈತರ ಬೇಡಿಕೆಗಳನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ''ಅಲ್ಪ ಮಳೆಯಿಂದ ಬಿತ್ತನೆ ಮಾಡಲು ಸಾಧ್ಯವಾಗದ ರೈತರ ಹಿತ ಕಾಪಾಡುವಲ್ಲಿ ಸರಕಾರ ವಿಫಲವಾಗಿದೆ. ಕೂಡಲೇ ನಾಲೆಗಳಿಗೆ ನೀರಾವರಿಗೆ ನೀರು ಬಿಡಬೇಕು' ಎಂದು ಅವರು ಒತ್ತಾಯಿಸಿದ್ದಾರೆ. 

ಕಳೆದ ಮೂರು ವರ್ಷಗಳಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ನೀರು ತಮಿಳುನಾಡಿಗೆ ಹರಿದಿದೆ ಎಂದು ಪ್ರತಿಪಾದಿಸಿದ ಅವರು, ಮೇಕೆದಾಟು ನಲ್ಲಿ ಸಮತೋಲನ ಜಲಾಶಯವನ್ನು ನಿರ್ಮಿಸಿದರೆ ಸಂಕಟದ ಸಮಯದಲ್ಲಿ ದೆ  ಹೆಚ್ಚುವರಿ ನೀರನ್ನು ಸಂಗ್ರಹಿಸಲು ಕರ್ನಾಟಕಕ್ಕೆ  ನೆರವಾಗಬಹುದೆಂದು ಹೇಳಿದರು. 

ಕಳೆದ ವರ್ಷ ಪೂರೈಸಿದ ಕಬ್ಬಿನ ಬಾಕಿ ಪಾವತಿಸುವಂತೆ ಆಗ್ರಹಿಸಿ ಆ.14ರಂದು ಮೈಸೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಬಣ್ಣಾರಿ ಶುಗರ್ಸ್ ಉಪವಿಭಾಗದ ಕಚೇರಿಗೆ ರೈತರು ಮುತ್ತಿಗೆ ಹಾಕಲಿದ್ದಾರೆ ಎಂದು ಶಾಂತಕುಮಾರ್ ತಿಳಿಸಿದರು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರಿಗೆ ಕೆಲ ದಿನಗಳ ಹಿಂದೆಯೇ ಮನವಿ ಸಲ್ಲಿಸಿದ್ದೆವು. ಆದರೆ ಇಲ್ಲಿಯವರೆಗೆ ಏನೂ ಮಾಡಿಲ್ಲ ಎಂದರು.

ಸಂಕಷ್ಟದಲ್ಲಿರುವ ಹತ್ತಿ ಬೆಳೆಗಾರರಿಗೆ ಸರಕಾರ ಫಸಲ್ ಬಿಮಾ ಯೋಜನೆಯಡಿ ಪರಿಹಾರ ಬಿಡುಗಡೆ ಮಾಡಬೇಕು. ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನಲ್ಲಿ 12 ಗಂಟೆ ನಿರಂತರ ವಿದ್ಯುತ್ ಪೂರೈಸಲು ಸರಕಾರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT