ಬಂಡೀಪು ಅರಣ್ಯ- ಗ್ರಾಮ ಗಡಿ ಭಾಗದಲ್ಲಿ ಅಳವಡಿಸಲಾಗಿರುವ ಬ್ಯಾರಿಕೇಡ್ 
ರಾಜ್ಯ

ಬಂಡೀಪುರ ಅರಣ್ಯಾಧಿಕಾರಿಗಳ ಸರಳ ಉಪಾಯದಿಂದ ಮಾನವ- ಆನೆ ಸಂಘರ್ಷಕ್ಕೆ ತಡೆ!

ಬಂಡೀಪುರ ಅರಣ್ಯಾಧಿಕಾರಿಗಳ ಸರಳ ಉಪಾಯದಿಂದ ಮಾನವ- ಆನೆ ಸಂಘರ್ಷ ನಿಯಂತ್ರಣಕ್ಕೆ ಬಂದಿದೆ.

ಮೈಸೂರು: ಬಂಡೀಪುರ ಅರಣ್ಯಾಧಿಕಾರಿಗಳ ಸರಳ ಉಪಾಯದಿಂದ ಮಾನವ- ಆನೆ ಸಂಘರ್ಷ ನಿಯಂತ್ರಣಕ್ಕೆ ಬಂದಿದೆ.

ಆನೆ ನಿರೋಧಕ ಕಂದಕ (ಇಪಿಟಿ) ಹಾಗೂ ಕೃಷಿ ಭೂಮಿಯ ಜಾಗದ ನಡುವೆ ಬ್ಯಾರಿಕೇಡ್ ಗಳನ್ನು ಹಾಕಲಾಗಿದ್ದು, ಆನೆಗಳಿಗೆ ಮನುಷ್ಯನ ಇರುವಿಕೆ ಇರುವ ಪ್ರದೇಶಗಳಿಗೆ ಬಾರದಂತೆ ತಡೆಯೊಡ್ಡಲಾಗಿದೆ. 

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯಾಧಿಕಾರಿಗಳ ಉಪಾಯ ಇದಾಗಿದ್ದು, ಈ ಹಿಂದೆ ಆನೆಗಳು ಅರಣ್ಯದ ಗಡಿ ಭಾಗದಲ್ಲಿರುವ ಗ್ರಾಮಗಳಿಗೆ ದಾಂಗುಡಿ ಇಡುತ್ತಿದ್ದದ್ದು ಸಾಮಾನ್ಯವಾಗಿತ್ತು. ನಿಯಂತ್ರಕ ಕ್ರಮವಾಗಿ ಅರಣ್ಯ ಸಿಬ್ಬಂದಿಗಳು ಆನೆ ನಿರೋಧಕ ಕಂದಕವನ್ನು ತೋಡಿದ್ದರು ಆದರೆ ಆನೆಗಳು ಗ್ರಾಮ ಪ್ರವೇಶಿಸುವುದು ಮುಂದುವರೆದಿತ್ತು. 1 ಕಿ.ಮೀ ವ್ಯಾಪ್ತಿಗೆ ಬ್ಯಾರಿಕೇಡ್ ಗಳನ್ನು ಹಾಕಲು ರೈಲ್ವೆ ಇಲಾಖೆಯಿಂದ ರೈಲು ಕಂಬಿಗಳನ್ನು 1.3 ಕೋಟಿ ರೂಪಾಯಿ ನೀಡಿ ಖರೀದಿಸಲಾಗಿತ್ತು. ಆದರೂ ಅರಣ್ಯ ಸಿಬ್ಬಂದಿಗಳಿಗೆ ಆನೆಗಳು ಬ್ಯಾರಿಕೇಡ್ ದಾಟದಂತೆ ಮಾಡಲು ಸಾಧ್ಯವಾಗಿರಲಿಲ್ಲ.

ಗ್ರಾಮಗಳೆಡೆಗೆ ನಾವು ರೈಲು ಬ್ಯಾರಿಕೇಡ್ ಗಳನ್ನು ಅಳವಡಿಸುತ್ತಿದ್ದೇವೆ, ಇದಕ್ಕೂ ಮುನ್ನ ಈ ಬ್ಯಾರಿಕೇಡ್ ಗಳನ್ನು ಇಪಿಟಿಗಳ ಬಳಿ ಅರಣ್ಯದೆಡೆಗೆ ಅಳವಡಿಸಲಾಗಿತ್ತು. ಇದರಿಂದಾಗಿ ಆನೆಗಳಿಗೆ ಬ್ಯಾರಿಕೇಡ್ ಗಳನ್ನು ಹತ್ತಿ ಟ್ರೆಂಚ್ ನ್ನು ದಾಟಲು ಸುಲಭವಾಗುತ್ತಿತ್ತು. ಈಗ ಹೊಸ ವಿಧಾನದಲ್ಲಿ ಆನೆಗಳಿಗೆ ಬ್ಯಾರಿಕೇಡ್ ನ್ನು ದಾಟುವುದು ಕಷ್ಟವಾಗಲಿದೆ ಎಂದು ಬಿಟಿಆರ್ ನ ನಿರ್ದೇಶಕ ರಮೇಶ್ ಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT