ಚಾಲಕ ನಾಗೇಶ್ ಆತ್ಮಹತ್ಯೆ 
ರಾಜ್ಯ

ದೇವನಹಳ್ಳಿ: ಡಿಪೋ ಎದುರೆ ಬಿಎಂಟಿಸಿ ಚಾಲಕ ಆತ್ಮಹತ್ಯೆ

ಬಿಎಂಟಿಸಿ ಚಾಲಕರೊಬ್ಬರು ದೇವನಹಳ್ಳಿಯ ಡಿಪೋದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೇವನಹಳ್ಳಿ: ಬಿಎಂಟಿಸಿ ಚಾಲಕರೊಬ್ಬರು ದೇವನಹಳ್ಳಿಯ ಡಿಪೋದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತನನ್ನು ದೇವನಹಳ್ಳಿಯ ತಾಲೂಕಿನ ಆವತಿ ಮೂಲದ 45 ವರ್ಷದ ನಾಗೇಶ್ ಎಂದು ತಿಳಿದುಬಂದಿದೆ. ಬಿಎಂಟಿಸಿಯಲ್ಲಿ ನಾಗೇಶ್ ಚಾಲಕ ಕಂ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದು,ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದರು. ಜತೆಗೆ ಕೆಲಸದ ಸ್ಥಳದಲ್ಲಿ ಕಿರುಕುಳ ಹೆಚ್ಚಾಗಿತ್ತು ಎನ್ನಲಾಗಿದೆ. 

ಇನ್ನು ನಿನ್ನೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ನಾಗೇಶ್, ಮತ್ತೆ ಮಧ್ಯರಾತ್ರಿ ಡಿಪೋಗೆ ಬಂದು ಡಿಪೋ ಮ್ಯಾನೆಜರ್ ಕೊಠಡಿ ಎದುರಿಗೆ ಇರುವ ಕಾಂಪೌಂಡ್‌ನ ಮೇಲಿದ್ದ ಕಂಬಿಗೆ ಹಗ್ಗದಿಂದ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ಸಿಬ್ಬಂದಿ ದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿಯ 'ವೋಟ್ ಚೋರಿ' ಆರೋಪ ಖಂಡಿಸಿ 272 ಗಣ್ಯರಿಂದ ಬಹಿರಂಗ ಪತ್ರ; ಚುನಾವಣಾ ಆಯೋಗದ ಪರವಾಗಿ ವಾದ!

'ನರಕಾಸುರ' ಮೋದಿಯನ್ನು ಕೊಲ್ಲಬೇಕು': ಜನರ ಎದುರೇ DMK ನಾಯಕನಿಂದ ಕೊಲೆ ಬೆದರಿಕೆ, ಚಪ್ಪಾಳೆ ತಟ್ಟಿದ ಮಹಿಳೆಯರು, Video

'ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೂ ನುಗ್ಗಿ ಭಾರತವನ್ನು ಹೊಡೆದಿದ್ದೇವೆ: ಈವರೆಗೂ ಶವ ಎಣಿಕೆ ಮಾಡೋದಕ್ಕೆ ಆಗ್ತಿಲ್ಲ! ಪಾಕಿಸ್ತಾನದ ಉದ್ಧಟತನ

ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ಲೀಕ್ ಕೇಸ್: ನನಗೇನು ಗೊತ್ತಿಲ್ಲ ಅನ್ನುತ್ತಿದ್ದ ಧನ್ವೀರ್ ಈಗ ವಿಜಯಲಕ್ಷ್ಮೀ ಹೆಸರು ಬಾಯಿಬಿಟ್ಟ!

ರೈಲಿನಲ್ಲಿ ಯುವಕನೋರ್ವ ನನ್ನ ಕುತ್ತಿಗೆ, ಬೆನ್ನು, ಖಾಸಗಿ ಭಾಗ ಮುಟ್ಟಿದ್ದ, ತಿರುಗಿ ನೋಡುವಷ್ಟರಲ್ಲಿ...: ಸಾರ್ವಜನಿಕ ಸ್ಥಳದಲ್ಲಾಗಿದ್ದ ಕರಾಳ ಘಟನೆ ತೆರದಿಟ್ಟ ನಟಿ Girija Oak

SCROLL FOR NEXT