ಸಂವಾದದಲ್ಲಿ ನಟ ಪ್ರಕಾಶ್ ರಾಜ್ 
ರಾಜ್ಯ

ಶಿವಮೊಗ್ಗ: ಪ್ರಕಾಶ್​ ರೈ ಸಂವಾದ ನಡೆಸಿದ ಕಾಲೇಜು ಕೊಠಡಿ ಶುದ್ಧೀಕರಣಗೊಳಿಸಿದ ವಿದ್ಯಾರ್ಥಿಗಳು!

ಭದ್ರಾವತಿಯ ಸರ್ ಎಂ.ವಿ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳನ್ನು ಹೊರಗಿಟ್ಟು ಪ್ರಕಾಶ್ ರೈ ಜೊತೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ಶಿವಮೊಗ್ಗ: ಭದ್ರಾವತಿಯ ಸರ್ ಎಂ.ವಿ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳನ್ನು ಹೊರಗಿಟ್ಟು ಪ್ರಕಾಶ್ ರೈ ಜೊತೆ ಸಂವಾದ ಕಾರ್ಯಕ್ರಮ ನಡೆಸಲಾಯಿತು. ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 'ರಂಗಭೂಮಿ, ಸಿನಿಮಾ ಮತ್ತು ಸಮಾಜ' ವಿಷಯದ ಸಂಬಂಧ ಸಂವಾದ ನಡೆಯಿತು. ಆದರೆ, ಕೆಲ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮದಿಂದ ಹೊರಗೆ ಇಡಲಾಗಿತ್ತು. 

ಇದರಿಂದ  ಕೆರಳಿದ ವಿದ್ಯಾರ್ಥಿಗಳು, ಧಿಕ್ಕಾರ ಕೂಗಿ ಒಳನುಗ್ಗಲು ಪ್ರಯತ್ನಿಸಿದರು. ದೇಶ ವಿರೋಧಿ ಶಕ್ತಿಗಳಿಗೆ ಸದಾ ಬೆಂಬಲಿಸುವ ಪ್ರಕಾಶ್ ರೈಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವ ಯೋಗ್ಯತೆ ಇಲ್ಲ ಎಂದು ಆಕ್ರೋಶ ಹೊರಹಾಕಿದರು. ಅಲ್ಲದೆ, ಕಾರ್ಯಕ್ರಮದ ನಂತರ ಪ್ರಕಾಶ್ ರಾಜ್ ಓಡಾಡಿದ ಜಾಗಕ್ಕೆಲ್ಲಾ ಗೋ ಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಪ್ರಕಾಶ್ ರಾಜ್, ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳೆಲ್ಲಾ ವಿಫಲವಾಗಿವೆ. ಆದರೆ ಈ ಬಗ್ಗೆ ಮಾತನಾಡುವವರು ಯಾರು? ಅವರದ್ದು 5 ವರ್ಷ ಮುಗಿಯುತ್ತೆ. ಅವರೇನು ದೇವರಲ್ಲ ಎಂದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಪರವಾಗಿದ್ದು ಇದರಿಂದ ಜನರಿಗೆ ಒಳ್ಳೆಯದಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಮನುಷ್ಯನಲ್ಲಿ ಪ್ರೀತಿ ಇದೆ, ಅದನ್ನು ಹಂಚಿ ಬದುಕಬೇಕು. ದೇಶದಲ್ಲಿ ಇವತ್ತು ಹಿಂಸೆಯೂ ನಡೆಯುತ್ತಿದೆ. ಇದು ಜನರಿಗೆ ಅರ್ಥವಾಗುತ್ತಿದೆ. ಮಾನವೀಯತೆ ತುಳಿಯುವವರ ವಿರುದ್ಧ ನಾವು ಪ್ರೀತಿಯಿಂದ ಎದ್ದು ನಿಲ್ಲುತ್ತಿದ್ದೇವೆ. ನಮಗೆ ದ್ವೇಷ ಬೇಕಿಲ್ಲ, ನಮಗೆ ಬೇಕಿರುವುದು ಪ್ರೀತಿ. ಎಲ್ಲರಲ್ಲೂ ಸಮಾನತೆ ಇರಬೇಕು. ನಮ್ಮ ಕ್ರೌರ್ಯ, ವಿರೋಧ ದೇಶ ಹಾಳಾಗಲು ಕಾರಣವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ರಂಗಭೂಮಿ ಕಲೆ ಬೆಳೆಸಲು ಹೊರಟಿದ್ದೇವೆ. ಮಕ್ಕಳಿಗಾಗಿ ವಿಶೇಷವಾಗಿ ರಂಗಕಲೆ ಕಲಿಸಲು ಮುಂದಾಗಿದ್ದೇವೆ. ಪ್ರಪಂಚದ ಬೇರೆ ಬೇರೆ ಕವಿಗಳ, ಬರಹಗಾರರ ಬರವಣಿಗೆಗಳನ್ನು ಇಟ್ಟುಕೊಂಡು ನಾಟಕ ಮಾಡಿಸುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT