ಸಿಎಂ ಸಿದ್ದರಾಮಯ್ಯ 
ರಾಜ್ಯ

ಅಸಮಾಧಾನ ಶಮನಕ್ಕೆ ಅಖಾಡಕ್ಕಿಳಿದ ಸಿಎಂ: ಈ ವರ್ಷ ಹೆಚ್ಚಿನ ಅನುದಾನ ನಿರೀಕ್ಷಿಸಬೇಡಿ; ಶಾಸಕರಿಗೆ ಸೂಚನೆ

ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ವರ್ಷ ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನಿರೀಕ್ಷಿಸಬೇಡಿ ಎಂದು ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸೂಚಿಸಿದ್ದಾರೆ.

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ವರ್ಷ ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನಿರೀಕ್ಷಿಸಬೇಡಿ ಎಂದು ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸೂಚಿಸಿದ್ದಾರೆ.

ಅನುದಾನ ಬಿಡುಗಡೆ ವಿಚಾರದಲ್ಲಿ ಸಚಿವರು ಹಾಗೂ ಶಾಸಕರ ನಡುವೆ ಎದುರಾಗಿರುವ ಭಿನ್ನಾಭಿಪ್ರಾಯಗಳ ನಿವಾರಿಸಲು ನಿನ್ನೆಯಷ್ಟೇ ಸಿದ್ದರಾಮಯ್ಯ ಅವರು, ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಸಭೆ ನಡೆಸಿದರು.

ಮುಖ್ಯಮಂತ್ರಿಗಳು ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ, ಧಾರವಾಡ ಜಿಲ್ಲೆಗಳ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿದರು.

ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಹಣ ಬಿಡುಗಡೆ ವಿಳಂಬ, ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ಸಮನ್ವಯದ ಕೊರತೆ ಮುಂತಾದ ಸಮಸ್ಯೆಗಳ ಕುರಿತು ಸಚಿವರು ಹಾಗೂ ಶಾಸಕರೊಂದಗೆ ಮಾತುಕತೆ ನಡೆಸಿದರು.

ಶಾಸಕರು ಹಾಗೂ ಸಚಿವರ ಸಮಸ್ಯೆಗಳ ಆಲಿಸಿದ ಬಳಿಕ ಪರಿಹಾರಕ್ಕೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.

ಅಲ್ಲದೆ, ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಕೈಗೊಳ್ಳಲು ಹಣ ಬಿಡುಗಡೆಗೆ ಇನ್ನೂ ಸ್ವಲ್ಪ ಸಮಯ ಕಾಯುವಂತೆ ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಅನೇಕ ಶಾಸಕರು ತಮ್ಮ ಕ್ಷೇತ್ರಗಳಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರು. ಆದರೆ ಐದು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ಕನಿಷ್ಠ ಎಂಟು ತಿಂಗಳಾದರೂ ಕಾಯುವಂತೆ, ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT