ಎಡದಿಂದ: ಸೀತಾ ಪೂಜಾರ್ತಿ, ಸುಂದರಿ ಪೂಜಾರ್ತಿ, ಯಮುನಾ ಪೂಜಾರ್ತಿ, ಪವಿತ್ರಾ ವಿ ಅಮೀನ್ ಮತ್ತು ದಿತ್ಯ ವಿ ಅಮೀನ್ 
ರಾಜ್ಯ

ಭಾರತ ಅಂಚೆಯ MSSC ಯೋಜನೆಗೆ ಮಂಗಳೂರಿನ ಕುಟುಂಬದ ಐದು ತಲೆಮಾರು ನೋಂದಣಿ!

ಕರಾವಳಿ ಜಿಲ್ಲೆ ಮಂಗಳೂರು ಮೂಲದ ಈ ಕುಟುಂಬದ ಮುತ್ತಜ್ಜಿಯ ವಯಸ್ಸು 103, ಅವರ ಮರಿಮೊಮ್ಮಗಳಿಗೆ ಮೂರು ವರ್ಷ. ಐದು-ಪೀಳಿಗೆಯ ಈ ಕುಟುಂಬ ಸದಸ್ಯರನ್ನು ಒಗ್ಗೂಡಿಸಿದ್ದು ಭಾರತೀಯ ಅಂಚೆ ಇಲಾಖೆ ಇತ್ತೀಚೆಗೆ ಆರಂಭಿಸಿರುವ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ (MSSC) ಅಡಿಯಲ್ಲಿ ಖಾತೆಗಳನ್ನು ತೆರೆದಿದ್ದಾರೆ.

ಬೆಂಗಳೂರು: ಕರಾವಳಿ ಜಿಲ್ಲೆ ಮಂಗಳೂರು ಮೂಲದ ಈ ಕುಟುಂಬದ ಮುತ್ತಜ್ಜಿಯ ವಯಸ್ಸು 103, ಅವರ ಮರಿಮೊಮ್ಮಗಳಿಗೆ ಮೂರು ವರ್ಷ. ಐದು-ಪೀಳಿಗೆಯ ಈ ಕುಟುಂಬ ಸದಸ್ಯರನ್ನು ಒಗ್ಗೂಡಿಸಿದ್ದು ಭಾರತೀಯ ಅಂಚೆ ಇಲಾಖೆ ಇತ್ತೀಚೆಗೆ ಆರಂಭಿಸಿರುವ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ (MSSC) ಅಡಿಯಲ್ಲಿ ಖಾತೆಗಳನ್ನು ತೆರೆದಿದ್ದಾರೆ.

ಆಗಸ್ಟ್ 3 ರಂದು ಮಂಗಳೂರು ಸಮೀಪದ ಕಿನ್ನಿಗೋಳಿ ಉಪ ಅಂಚೆ ಕಛೇರಿಯಲ್ಲಿ ಉಳಿತಾಯ ಖಾತೆಗಳನ್ನು ತೆರೆದ ಭಾರತದ ಏಕೈಕ ಐದು ತಲೆಮಾರಿನ ಕುಟುಂಬ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. 

ಕುಪ್ಪೆಪದವು ನಿವಾಸಿ ಸೀತಾ ಪೂಜಾರ್ತಿ (103 ವ); ಕೈಕಂಬದಲ್ಲಿ ವಾಸವಾಗಿರುವ ಅವರ ಪುತ್ರಿ ಸುಂದರಿ ಪೂಜಾರ್ತಿ (72 ವ); ಆಕೆಯ ಮೊಮ್ಮಗಳು ಉಲ್ಲೈ ಬೇತುವಿನ ಯಮುನಾ ಪೂರ್ಜಾರ್ತಿ (50 ವ); ಆಕೆಯ ಮರಿ ಮೊಮ್ಮಗಳು ಪವಿತ್ರಾ ವಿ ಅಮೀನ್ (33 ವ ); ಮತ್ತು ಅವರ ಮರಿ ಮರಿ ಮೊಮ್ಮಗಳು ದಿತ್ಯಾ ವಿ ಅಮೀನ್ (3 ವ) ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ MSSC ಅಡಿಯಲ್ಲಿ ಉಳಿತಾಯ ಖಾತೆಗಳನ್ನು ತೆರೆದಿದ್ದಾರೆ.

ಮಂಗಳೂರು ಅಂಚೆ ವಿಭಾಗದ ವ್ಯಾಪ್ತಿಯ ಕಿನ್ನಿಗೋಳಿ ಉಪ ಅಂಚೆ ಕಛೇರಿಯ ಸಿಬ್ಬಂದಿ ಈ ಸಾಧನೆಗಾಗಿ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ಹಿರಿಯ ಮಹಿಳೆಯರ ನಿವಾಸಗಳಿಗೆ ಭೇಟಿ ನೀಡಿದ್ದಲ್ಲದೆ, ಜಿಲ್ಲೆಯ ವಿವಿಧೆಡೆ ನೆಲೆಸಿರುವ ಅವರೆಲ್ಲರನ್ನೂ ಪವಿತ್ರಾಳ ಪತಿ ವಿಜಯ್ ಅಮೀನ್ ಕಾರಿನಲ್ಲಿ ಅಂಚೆ ಕಚೇರಿಗೆ ಕರೆತಂದರು.

ಯೋಜನೆಯ ಲಾಭ ಪಡೆಯುವುದು ಉದ್ದೇಶವಾಗಿತ್ತು: ಕುಟುಂಬದ ಅನನ್ಯ ಸಾಧನೆ ಗುರುತಿಸಿ ಹತ್ತಿರದ ರೆಸ್ಟೋರೆಂಟ್‌ನಲ್ಲಿ ಸವಿಯಾದ ಭೋಜನ ಕೊಡಿಸಿದ್ದಲ್ಲದೆ ಜೊತೆಗೆ ಮಹಿಳೆಯರಿಗೆ ಸೀರೆಗಳನ್ನು ಉಡುಗೊರೆಯಾಗಿ ನೀಡಲಾಯಿತು ಎಂದು ಕಿನ್ನಿಗೋಳಿಯ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮುಖ್ಯಸ್ಥ ಕೆ ರಘುನಾಥ್ ಕಾಮತ್ TNIE ಗೆ ತಿಳಿಸಿದರು.

32 ವರ್ಷಗಳ ಹಿಂದೆ ಇಲಾಖೆಗೆ ಸೇರಿದ್ದ ಕಾಮತ್ ಅವರು ಮನೆ ಮನೆಗೆ ತೆರಳಿ ಯೋಜನೆ ಪ್ರಚಾರ ಮಾಡುತ್ತಿದ್ದಾರೆ. ಅವರು ಪವಿತ್ರಾ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಯೋಜನೆಯ ಪ್ರಯೋಜನಗಳ ಬಗ್ಗೆ ವಿವರಿಸಿದರು.ನಾನು ಪವಿತ್ರ ಅವರ ಕುಟುಂಬದ ಇತರ ಮಹಿಳೆಯರ ಬಗ್ಗೆ ಕೇಳಿದಾಗ ಎಲ್ಲಾ ವಿವರ ನೀಡಿದರು. ಅವರ ಹೆಸರಿನಲ್ಲಿಯೂ ಖಾತೆಗಳನ್ನು ತೆರೆಯಲು ನಿರ್ಧರಿಸಿದೆವು ಎಂದರು. 

ಹೆಚ್ಚಿನ ಬಡ್ಡಿದರ ಮತ್ತು ಅದು ನೀಡುವ ಉಳಿತಾಯದ ಬಗ್ಗೆ ಕೇಳಿದಾಗ ಕುಟುಂಬದ ಎಲ್ಲರು ಯೋಜನೆಯ ಲಾಭ ಪಡೆಯಬೇಕೆಂದು ನಾನು ಬಯಸಿದೆ. ಅಂಚೆ ನೌಕರರು 40 ಕಿಮೀ ದೂರದಲ್ಲಿ ವಾಸಿಸುವ ನನ್ನ ಮುತ್ತಜ್ಜಿಯನ್ನು ಅಂಚೆ ಕಚೇರಿಗೆ ಕರೆತರಲು ನಮಗೆ ಸಹಾಯ ಮಾಡಿದರು ಎನ್ನುತ್ತಾರೆ ಪವಿತ್ರಾ. 

ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ, MSSC ಮೂಲಕ ಭಾರತ ಅಂಚೆ ಇಲಾಖೆ ಒಂದೇ ಬಾರಿಗೆ ಐದು ತಲೆಮಾರುಗಳನ್ನು ತಲುಪಿದೆ. ಉಳಿತಾಯ ಖಾತೆಗಳನ್ನು ತೆರೆಯುವಂತೆ ಮನವೊಲಿಸಿದ ರಘುನಾಥ್ ಕಾಮತ್ ಅವರಿಗೆ ಇದರ ಶ್ರೇಯ ಸಲ್ಲುತ್ತದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT