ಕಂದಾಯ ಸಚಿವ ಕೃಷ್ಣಬೈರೇಗೌಡ 
ರಾಜ್ಯ

ಒತ್ತುವರಿಯಾದ ಸರ್ಕಾರಿ ಭೂಮಿಗಳ ಪಟ್ಟಿ ಮಾಡಿ: ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಸರ್ಕಾರಿ ಒತ್ತುವರಿ ಜಮೀನುಗಳ ಪ್ರಾಥಮಿಕ ಒತ್ತುವರಿ ಪಟ್ಟಿಯನ್ನು ಶೀಘ್ರದಲ್ಲಿ ತಯಾರಿಸಿ ಹಾಗೂ ಪ್ರತೀ ವಾರಾಂತ್ಯದಲ್ಲಿ ಒತ್ತುವರಿ ತೆರವಿಗೆ ಮುಂದಾಗಿ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಬೆಂಗಳೂರು: ಸರ್ಕಾರಿ ಒತ್ತುವರಿ ಜಮೀನುಗಳ ಪ್ರಾಥಮಿಕ ಒತ್ತುವರಿ ಪಟ್ಟಿಯನ್ನು ಶೀಘ್ರದಲ್ಲಿ ತಯಾರಿಸಿ ಹಾಗೂ ಪ್ರತೀ ವಾರಾಂತ್ಯದಲ್ಲಿ ಒತ್ತುವರಿ ತೆರವಿಗೆ ಮುಂದಾಗಿ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಮುಖ್ಯ ಕಾರ್ಯದರ್ಶಿ, ಬೆಂಗಳೂರು ನಗರ/ಗ್ರಾಮೀಣ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಆಯುಕ್ತರೊಂದಿಗೆ ಸಭೆ ನಡೆಸಿದ ಅವರು, ಅತಿಕ್ರಮಣ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಸರಕಾರಿ ಭೂಮಿ ಅತಿಕ್ರಮಣ ದೊಡ್ಡ ಸಮಸ್ಯೆಯಾಗಿದೆ. ಸರ್ಕಾರಿ ಭೂಮಿಯನ್ನು ಭೂ ಮಾಫಿಯಾ ಕಬಳಿಕೆ ಮಾಡುತ್ತಿದೆ. ಇದರಿಂದ ಸರಕಾರಕ್ಕೆ ಸಾಕಷ್ಟು ಆದಾಯ ನಷ್ಟವಾಗುತ್ತಿದೆ. ಆದ್ದರಿಂದ ಅಧಿಕಾರಿಗಳು ಆದಷ್ಟು ಬೇಗ ಒತ್ತುವರಿ ಭೂಮಿಗಳ ಪ್ರಾಥಮಿಕ ಪಟ್ಟಿ ಸಿದ್ಧಪಡಿಸಿ, ಪ್ರತಿ ಶನಿವಾರ ಮತ್ತು ಭಾನುವಾರ ಒತ್ತುವರಿ ತೆರವಿಗೆ ಮುಂದಾಗಬೇಕು ಎಂದು ಸೂಚಿಸಿದರು.

ಕಳೆದ ಅಧಿವೇಶನದಲ್ಲಿ ಸರಕಾರಿ ಭೂಮಿ ಒತ್ತುವರಿ ತೆರವು ಮಾಡುವಂತೆ ಸರಕಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ವಾರಕ್ಕೊಮ್ಮೆ ಸಭೆ ನಡೆಸಿ, ಒತ್ತುವರಿ ತೆರವು ಮಾಡುವುದರ ಜತೆಗೆ ಜಮೀನುಗಳಿಗೆ ಬೇಲಿ ಹಾಕಲು ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ಇದೇ ವೇಳೆ ಭೂಮಾಪಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ತಹಶೀಲ್ದಾರ್ ನೇತೃತ್ವದಲ್ಲಿ ಸರ್ಕಾರಿ ದಾಖಲೆಗಳಲ್ಲಿರುವ ಪ್ರತಿಯೊಂದು ನಿವೇಶನವನ್ನು ಮರು ಸರ್ವೆ ಮಾಡಿ, ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವಂತೆಯೂ ಸೂಚಿಸಿದರು.

ಭೂಸುಧಾರಣೆ-ಬಗರ್ ಹುಕುಂ ಸಮಿತಿಗಳಡಿ ಭೂಮಿ ಮಂಜೂರಾದ ಅರ್ಹ ಫಲಾನುಭವಿಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಭೂಮಾಫಿಯಾಗಳು ಸರ್ಕಾರಿ ದಾಖಲೆಗಳನ್ನು ಕದ್ದೊಯ್ಯುವ ಅಥವಾ ತಿದ್ದುವ ಹಲವು ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮರುಸರ್ವೇ ಅಗತ್ಯವಿದೆ. ಈ ಭೂಮಿಗಳಷ್ಟೇ ಅಲ್ಲದೆ, ಗೋಮಾಳ, ಸ್ಮಶಾನ ಭೂಮಿ, ಕೆರೆ, ಕೊಳಗಳು ಕೂಡ ಒತ್ತುವರಿಯಾಗಿದೆ. ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT