ಎನ್ಐಎ 
ರಾಜ್ಯ

ಬೆಂಗಳೂರು: NIA ದಾಳಿ ವೇಳೆ ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳು ಬಂಧನ

ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬೆಂಗಳೂರಿನಲ್ಲಿ ಅಕ್ರಮವಾಗಿ ತಂಗಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಶೋಧ ಕಾರ್ಯಾಚರಣೆಯಲ್ಲಿ ಪತ್ತೆ ಹಚ್ಚಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬೆಂಗಳೂರಿನಲ್ಲಿ ಅಕ್ರಮವಾಗಿ ತಂಗಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಶೋಧ ಕಾರ್ಯಾಚರಣೆಯಲ್ಲಿ ಪತ್ತೆ ಹಚ್ಚಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎನ್‌ಐಎ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದರು. ಈ ವೇಳೆ ವಿಚಾರಣೆ ನಡೆಸಿದಾಗ, ಬೆಳ್ಳಂದೂರು ಪ್ರದೇಶದ ವಸತಿ ಪ್ರದೇಶದಲ್ಲಿ ಮೂವರು ಬಾಂಗ್ಲಾದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ.

ಅಕ್ರಮ ವಲಸಿಗರನ್ನು ಖಲೀಲ್ ಚಪರಾಸಿ, ಅಬ್ದುಲ್ ಖದೀರ್ ಮತ್ತು ಮೊಹಮ್ಮದ್ ಜಹೀದ್ ಎಂದು ಗುರುತಿಸಲಾಗಿದೆ. ಇವರೆಲ್ಲರನ್ನೂ ಎನ್‌ಐಎ ವಶಕ್ಕೆ ಪಡೆದು ಬೆಳ್ಳಂದೂರು ಠಾಣೆ ಪೊಲೀಸರಿಗೆ ಹಸ್ತಾಂತರಿಸಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ Kohli

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

SCROLL FOR NEXT