ಸಿಐಡಿ (ಸಾಂಕೇತಿಕ ಚಿತ್ರ) 
ರಾಜ್ಯ

ವಾಶ್ ರೂಮ್ ವಿಡಿಯೋ ಪ್ರಕರಣ: ಉಡುಪಿಗೆ ಸಿಐಡಿ ತಂಡ ಆಗಮನ; ಮಾಹಿತಿ ಸಂಗ್ರಹ

ಕಾಲೇಜಿನ ವಾಷ್ ರೂಮ್ ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ತಂಡ ಉಡುಪಿಗೆ ಆಗಮಿಸಿದೆ. 

ಉಡುಪಿ: ಕಾಲೇಜಿನ ವಾಷ್ ರೂಮ್ ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ತಂಡ ಉಡುಪಿಗೆ ಆಗಮಿಸಿದೆ. 

ರಾಜ್ಯ ಸರ್ಕಾರ ಪ್ರಕರಣವನ್ನು ಸೋಮವಾರದಂದು ಸಿಐಡಿಗೆ ಹಸ್ತಾಂತರಿಸಿತ್ತು. ಡಿವೈಎಸ್ ಪಿ ಅಂಜುಮಾಲ ನಾಯಕ್ ನೇತೃತ್ವದ ತಂಡ ಉಡುಪಿ ಜಿಲ್ಲಾ ಎಸ್ ಪಿ ಕಚೇರಿಗೆ ಭೇಟಿ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿದೆ.

ಎಸ್ ಪಿ ಅಕ್ಷಯ್ ಮಚ್ಚೀಂದ್ರ ಹಾಗೂ ಈ ವರೆಗೂ ತನಿಖಾಧಿಕಾರಿಯಾಗಿದ್ದ ಡಿವೈಎಸ್ ಪಿ ಬೆಳ್ಳಿಯಪ್ಪ  ಅವರೊಂದಿಗೆ ಸಿಐಡಿ ತಂಡ ಚರ್ಚೆ ನಡೆಸಿದೆ. ಸಿಐಡಿ ತಂಡ ಸಂತ್ರಸ್ತೆ, ಆರೋಪಿ ವಿದ್ಯಾರ್ಥಿಗಳು ಮತ್ತು ಕಾಲೇಜು ಆಡಳಿತದ ಪ್ರತಿನಿಧಿಗಳಿಂದ ಸಾಕ್ಷ್ಯವನ್ನು ತೆಗೆದುಕೊಳ್ಳುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 19 ರಂದು ನಡೆದ ಈ ಘಟನೆಯು ರಾಜಕೀಯ ತಿರುವು ಪಡೆದುಕೊಂಡಿದ್ದು, ಇಲ್ಲಿನ ಪ್ಯಾರಾಮೆಡಿಕಲ್ ಕಾಲೇಜಿನ ವಾಷ್  ರೂಂನಲ್ಲಿ ವಿದ್ಯಾರ್ಥಿನಿಯರನ್ನು ಚಿತ್ರೀಕರಿಸಿದ ಮೂವರು ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪಟ್ಟಣದಲ್ಲಿ ಸರಣಿ ಪ್ರತಿಭಟನೆಗಳು ನಡೆದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT