ಸ್ಪಂದನಾ ಪಂಚಭೂತಗಳಲ್ಲಿ ಲೀನ 
ರಾಜ್ಯ

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಂಚಭೂತಗಳಲ್ಲಿ ಲೀನ

ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್​ನಲ್ಲಿ...

ಬೆಂಗಳೂರು: ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್​ನಲ್ಲಿ ನೆರವೇರಿಸಲಾಗಿದ್ದು, ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಇಂದು ಸಂಜೆ ಹರಿಶ್ಚಂದ್ರಘಾಟ್​ನಲ್ಲಿ ಈಡಿಗ ಬಿಲ್ಲವ ಸಮುದಾಯದ ಸಂಪ್ರದಾಯದಂತೆ ಸ್ಪಂದನಾ ಅವರ ಅಂತ್ಯಕ್ರಿಯೆ ನಡೆದಿದ್ದು, ಪತಿ ವಿಜಯ್ ರಾಘವೇಂದ್ರ ಹಾಗೂ ಪುತ್ರ ಶೌರ್ಯ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಕುಟುಂಬಸ್ಥರು, ಹಲವು ಗಣ್ಯರು ಸ್ಪಂದನಾಗೆ ಕಣ್ಣೀರಿನ ವಿದಾಯ ಹೇಳಿದರು. 

ಮಲ್ಲೇಶ್ವರಂನಿಂದ ಹರಿಶ್ಚಂದ್ರಘಾಟ್​ವರೆಗೆ ಸ್ಪಂದನಾ ಅವರ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು. ಅಂತಿಮಯಾತ್ರೆಯ ವೇಳೆ ರಸ್ತೆಯುದ್ದಕ್ಕೂ ನೂರಾರು ಜನ ಸ್ಪಂದನಾ ಅವರ ಅಂತಿಮದರ್ಶನ ಪಡೆದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT