ಕೃಷ್ಣೇಗೌಡ-ಹೆಚ್ ಡಿ ರೇವಣ್ಣ 
ರಾಜ್ಯ

ಜೆಡಿಎಸ್ ಮುಖಂಡ, ಶಾಸಕ ಹೆಚ್ ಡಿ ರೇವಣ್ಣ ಆಪ್ತನ ಬರ್ಬರ ಹತ್ಯೆ!

ಶಾಸಕ ಹೆಚ್ ಡಿ ರೇವಣ್ಣ ಅತ್ಯಾಪ್ತ, ಜೆಡಿಎಸ್ ಮುಖಂಡ, ಉದ್ಯಮಿ ಕೃಷ್ಣೇಗೌಡ ಎಂಬುವರನ್ನು ಹಾಡುಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಹಾಸನ: ಗ್ರಾನೈಟ್ ವ್ಯಾಪಾರಿ, ಗುತ್ತಿಗೆದಾರ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ನಿಕಟವರ್ತಿ ಕೃಷ್ಣೇಗೌಡ(55) ಎಂಬುವರನ್ನು ದುಷ್ಕರ್ಮಿಗಳು ಇಂದು ಹಾಸನದ ಕೈಗಾರಿಕಾ ಅಭಿವೃದ್ಧಿ ಕೇಂದ್ರದ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. 

ಪ್ರತ್ಯಕ್ಷ ಮಾಹಿತಿಯ ಪ್ರಕಾರ, ಶ್ರೀರಾಮ ಮಾರ್ಬಲ್ ಅವರ ಮಾಲೀಕತ್ವದ ಮುಂಭಾಗದಲ್ಲಿ ಮಧ್ಯಾಹ್ನ 12.45 ರ ಸುಮಾರಿಗೆ ಘಟನೆ ಸಂಭವಿಸಿದೆ. ಘಟಕದ ಮುಂದೆ ಇನ್ನೋವಾ ಕಾರನ್ನು ನಿಲ್ಲಿಸಿ ಗ್ರಾನೈಟ್ ಘಟಕಕ್ಕೆ ಹೋಗುತ್ತಿದ್ದಾಗ ಐವರ ತಂಡ ಇನ್ನೋವಾ ಕಾರಿನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ. 

ದುಷ್ಕರ್ಮಿಗಳು ಮೊದಲು ಕೃಷ್ಣೇಗೌಡರಿಗೆ ಹಿಂಬದಿಯಿಂದ ಬಂದು ಹಲ್ಲೆ ನಡೆಸಿದ್ದಾರೆ. ನೆಲಕ್ಕೆ ಬಿದ್ದ ನಂತರ ನಿರಂತರವಾಗಿ ಮಾರಕಾಸ್ತ್ರಗಳಿಂದ ಹಲವು ಬಾರಿ ದಾಳಿ ನಡೆಸಿದ್ದಾರೆ. ಐವರು ಸದಸ್ಯರ ತಂಡ ಬೆಳಗ್ಗೆಯಿಂದಲೇ ವಾಹನವೊಂದರಲ್ಲಿ ಕುಳಿತು ಕೃಷ್ಣೇಗೌಡರ ಚಲನವಲನಗಳನ್ನು ಗಮನಿಸಿದ್ದಾರೆ. ಬೆಳಿಗ್ಗೆಯಿಂದ ಅವರನ್ನು ಹಿಂಬಾಲಿಸಿದ್ದಾರೆ. ಸುಪಾರಿ ಕೊಲೆ ಮಾಡಿರುವ ಶಂಕೆ ಪೊಲೀಸರಿಗೆ ವ್ಯಕ್ತವಾಗಿದೆ. 

ಹತ್ಯೆಗೀಡಾದ ಕೃಷ್ಣೇಗೌಡ ಹಾಸನ ನಗರದಲ್ಲಿ ಹಣಕಾಸಿನ ವಿಚಾರದಲ್ಲಿ ಬೇರೆ ಬೇರೆ ವ್ಯಕ್ತಿಗಳೊಂದಿಗೆ ಮನಸ್ತಾಪ ಹೊಂದಿದ್ದರು ಎನ್ನಲಾಗಿದೆ. ಹಲವು ಬಾರಿ ಜಗಳವಾಡಿದ್ದು, ಈ ಸಂಬಂಧ ನಗರ ಠಾಣೆಯಲ್ಲಿ ದೂರು ಮತ್ತು ಪ್ರತಿದೂರುಗಳು ದಾಖಲಾಗಿವೆ. 

ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಸ್ನಿಫರ್ ಡಾಗ್ ಮತ್ತು ಬೆರಳಚ್ಚು ತಜ್ಞರನ್ನೊಳಗೊಂಡ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಹಾಸನದ ಎಚ್‌ಐಎಂಎಸ್ ಆಸ್ಪತ್ರೆಗೆ ಸ್ಥಳಾಂತರಿಸಿತು. ಕ್ರೂರ ಹತ್ಯೆಯಿಂದ ಎಚ್ಚೆತ್ತ ಪೊಲೀಸರು ಪೊಲೀಸ್ ಪಡೆಗಳನ್ನು ನಿಯೋಜಿಸಿ ಪೊಲೀಸ್ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT