ಕರ್ನಾಟಕ ಹೈಕೋರ್ಟ್ 
ರಾಜ್ಯ

ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಆದೇಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಲ್ಲಿಸಿರುವ ವರದಿಯಿಂದ ತೃಪ್ತವಾಗಿಲ್ಲದ ಕರ್ನಾಟಕ ಹೈಕೋರ್ಟ್ ಮಂಗಳವಾರ ಸ್ಥಳೀಯ ಸಂಸ್ಥೆಗೆ ಎಚ್ಚರಿಕೆ ನೀಡಿದ್ದು, ಮೂರು ವಾರಗಳಲ್ಲಿ ಸಾರ್ವಜನಿಕ ಮತ್ತು ಸಮುದಾಯ ಶೌಚಾಲಯಗಳ ಸ್ಥಿತಿಯ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಲ್ಲಿಸಿರುವ ವರದಿಯಿಂದ ತೃಪ್ತವಾಗಿಲ್ಲದ ಕರ್ನಾಟಕ ಹೈಕೋರ್ಟ್ ಮಂಗಳವಾರ ಸ್ಥಳೀಯ ಸಂಸ್ಥೆಗೆ ಎಚ್ಚರಿಕೆ ನೀಡಿದ್ದು, ಮೂರು ವಾರಗಳಲ್ಲಿ ಸಾರ್ವಜನಿಕ ಮತ್ತು ಸಮುದಾಯ ಶೌಚಾಲಯಗಳ ಸ್ಥಿತಿಯ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ ಪೀಠವು, 'ಲೆಟ್ಜ್‌ಕಿಟ್ ಫೌಂಡೇಶನ್' ಸಲ್ಲಿಸಿದ 2020ರ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿತು. 

ಹೈಕೋರ್ಟ್‌ನ ಹಿಂದಿನ ನಿರ್ದೇಶನದ ಮೇರೆಗೆ ಬಿಬಿಎಂಪಿ ಅಫಿಡವಿಟ್ ಬದಲಿಗೆ ಕ್ರಮ ತೆಗೆದುಕೊಂಡ ವರದಿಯನ್ನು ಸಲ್ಲಿಸಿತ್ತು. ಆ ವರದಿಯಲ್ಲಿ ವಿವರಗಳ ಕೊರತೆಯಿರುವುದನ್ನು ನ್ಯಾಯಾಲಯ ಗಮನಿಸಿದೆ.

ಬಿಬಿಎಂಪಿಯ ನಿಷ್ಕ್ರಿಯತೆ ಮತ್ತು ಸರ್ಕಾರದ ಮೌನದ ಬಗ್ಗೆ ನಿರ್ಣಾಯಕ ನಿಲುವನ್ನು ತೆಗೆದುಕೊಂಡ ನ್ಯಾಯಾಲಯ, ಸರ್ಕಾರವು ಸಾರ್ವಜನಿಕರ ಅಗತ್ಯಗಳಿಗೆ ಮೂಕಪ್ರೇಕ್ಷಕನಾಗಿ ವರ್ತಿಸಲು ಸಾಧ್ಯವಿಲ್ಲ. ಕಣ್ಣು ಮತ್ತು ಬಾಯಿ ಮುಚ್ಚಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

ಸ್ವಚ್ಛ ಮತ್ತು ನೈರ್ಮಲ್ಯದ ಸಾರ್ವಜನಿಕ ಶೌಚಾಲಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಮತ್ತು ಅದು ತನ್ನ ಕರ್ತವ್ಯದಿಂದ ದೂರವಿರಬಾರದು ಎಂದು ನ್ಯಾಯಾಲಯ ಹೇಳಿದೆ.

ಈ ಅವಲೋಕನಗಳನ್ನು ಮಾಡಲು ನ್ಯಾಯಾಲಯಕ್ಕೆ ಉತ್ತೇಜನ ನೀಡಿದ ಪಿಐಎಲ್‌ ಕುರಿತು ಸ್ಪಷ್ಟ ನಿಲುವು ತೆಗೆದುಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಅಂಗವಿಕಲರಿಗೆ ಶೌಚಾಲಯ ವ್ಯವಸ್ಥೆ ಇಲ್ಲ. ಹಲವೆಡೆ ಮಹಿಳೆಯರ ಶೌಚಾಲಯದ ಕಿಟಕಿಗಳು ಒಡೆದಿವೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಈ ಹಿಂದೆ ಏಪ್ರಿಲ್ 6 ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯದ ಸೂಚನೆ ಮೇರೆಗೆ ಬಿಬಿಎಂಪಿ ವರದಿ ಸಲ್ಲಿಸಿತ್ತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು (ಕೆಎಸ್ಎಲ್ಎಸ್ಎ) ಸಾರ್ವಜನಿಕ ಶೌಚಾಲಯಗಳ ಕೊರತೆಗಳು ಮತ್ತು ಸೇವೆಗಳನ್ನು ಸುಧಾರಿಸಲು ಬಿಬಿಎಂಪಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಸಿದೆ.

ಕೆಎಸ್ಎಲ್ಎಸ್ಎ ನೀಡಿರುವ ಕ್ರಮಗಳು, ಸಲಹೆಗಳು ಮತ್ತು ಅವಲೋಕನಗಳನ್ನು ಪರಿಶೀಲಿಸಲಾಗುವುದು ಮತ್ತು ಎಲ್ಲಾ ನ್ಯೂನತೆಗಳನ್ನು ಆರು ವಾರಗಳಲ್ಲಿ ಸರಿಪಡಿಸಲಾಗುವುದು ಎಂದು 2021ರಲ್ಲಿ ಬಿಬಿಎಂಪಿ ನ್ಯಾಯಾಲಯಕ್ಕೆ ಭರವಸೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT