ಸಾಂದರ್ಭಿಕ ಚಿತ್ರ 
ರಾಜ್ಯ

ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿನಿಯರ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್‌‌ ಅಪ್ಲೋಡ್ ಮಾಡುತ್ತಿದ್ದ ವ್ಯಕ್ತಿ ಬಂಧನ

ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್‌ಗಳನ್ನು ಅಪ್ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್‌ಗಳನ್ನು ಅಪ್ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಂಧಿತನನ್ನು ರಜನಿಕಾಂತ್ ಎಂದು ಗುರುತಿಸಲಾಗಿದ್ದು, ಇದೇ ಕಾಲೇಜಿನ ಹಳೆ ವಿದ್ಯಾರ್ಥಿ ಎನ್ನಲಾಗಿದೆ.

ಕಡಿಮೆ ಹಾಜರಾತಿಯಿಂದಾಗಿ ರಜನಿಕಾಂತ್ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡದ ಕಾರಣ, 'ಕಾಶ್ಮೀರಾ1990_0' ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿದ ಆತ, ಆ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಬಗ್ಗೆ ಅಸಭ್ಯ ಮತ್ತು ಅಶ್ಲೀಲ ಪೋಸ್ಟ್‌ಗಳನ್ನು ಅಪ್‌ಲೋಡ್ ಮಾಡಿದ್ದಾನೆ.

ಅಲ್ಲದೆ, ಸಾಧ್ಯವಾದರೆ ತನ್ನನ್ನು ಹಿಡಿಯಲಿ ಎಂದು ಆರೋಪಿ ಪೊಲೀಸರಿಗೆ ಸವಾಲು ಹಾಕಿದ್ದನು.

ತಮ್ಮ ಫೋಟೊಗಳನ್ನು ಅಪ್ಲೋಡ್ ಮಾಡಿರುವ ಕುರಿತು ವಿದ್ಯಾರ್ಥಿನಿಯರು ಜೂನ್ 20 ಕಾಲೇಜು ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಆದರೆ, ಅವರ ದೂರನ್ನು ನಿರ್ಲಕ್ಷಿಸಿದ್ದರಿಂದ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದಾರೆ.

ಪೊಲೀಸರಿಗೆ ದೂರು ನೀಡಿದ ನಂತರ, ಆರೋಪಿ Instagram ನಲ್ಲಿ ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದಾನೆ.

'ಆರೋಪಿಯು ಈ ಘಟನೆಗೆ ಕೋಮು ಬಣ್ಣ ಬಳಿಯಲು ಪ್ರಯತ್ನಿಸಿದ್ದನು. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಟಿಪ್ಪು ಸುಲ್ತಾನ್ (ಮೈಸೂರಿನ ಹಿಂದಿನ ದೊರೆ)ಗೆ ನಮಸ್ಕಾರ ಮಾಡುತ್ತಿರುವ ಫೋಟೊಗಳನ್ನು ಸಹ ಅಪ್ಲೋಡ್ ಮಾಡಿದ್ದಾನೆ' ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪೋಸ್ಟ್‌ಗಳು ವೈರಲ್ ಆಗಿದ್ದು, ಹುಬ್ಬಳ್ಳಿಯ ಪೋಷಕರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಪೊಲೀಸರು ಕಾಲೇಜಿನ ಪ್ರಾಂಶುಪಾಲರ ಹೇಳಿಕೆ ಪಡೆದಿದ್ದು, ವಿದ್ಯಾರ್ಥಿಗಳ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?