ಸುಳ್ಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸೌಜನ್ಯ ತಾಯಿ ಕುಸುಮವತಿ 
ರಾಜ್ಯ

ನನ್ನ ಮಗಳ ಆತ್ಮ ನ್ಯಾಯಕ್ಕಾಗಿ ಕಾಯುತ್ತಿದೆ: ಪ್ರತಿಭಟನೆ ವೇಳೆ ಸೌಜನ್ಯ ತಾಯಿ ಅಳಲು

ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ನ್ಯಾಯ ಸಿಗದೇ ಇರುವ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನೆ, ಹೋರಾಟಗಳು ತೀವ್ರಗೊಂಡಿವೆ.

ಸುಳ್ಯ: ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ನ್ಯಾಯ ಸಿಗದೇ ಇರುವ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನೆ, ಹೋರಾಟಗಳು ತೀವ್ರಗೊಂಡಿವೆ.
 
ಸುಳ್ಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸೌಜನ್ಯ ತಾಯಿ ಕುಸುಮವತಿ ಕಣ್ಣೀರಿಟ್ಟಿದ್ದು, ನನ್ನ ಮಗಳ ಆತ್ಮ ಶಾಂತಿ ಪಡೆಯುವವರೆಗೆ ನನ್ನನ್ನು ಬೆಂಬಲಿಸಿ ಎಂದು ಕೇಳಿಕೊಂಡಿದ್ದಾರೆ.
 
ಸೌಜನ್ಯ ಹೋರಾಟ ಸಮಿತಿಯಿಂದ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ನನ್ನ ಮಗಳ ಆತ್ಮ ನ್ಯಾಯಕ್ಕಾಗಿ ಕಾಯುತ್ತಿದೆ. ಆಕೆಗೆ ನ್ಯಾಯ ಒದಗಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನೂ ನಾನು ಮಾಡುತ್ತಿದ್ದೇನೆ. ನನ್ನ ಈ ಹೋರಾಟದಲ್ಲಿ ಕೈ ಜೋಡಿಸುವಂತೆ ಪ್ರತಿಯೊಬ್ಬರಲ್ಲೂ ಪ್ರಾರ್ಥಿಸುತ್ತೇನೆ ನನ್ನ ಮಗಳಿಗೆ ಆದದ್ದನ್ನು ಯಾರೂ ಸಹಿಸಬಾರದು. ಈ ಅನ್ಯಾಯ ಕೊನೆಯಾಗಬೇಕು,'' ಎಂದು ಹೇಳಿದ್ದಾರೆ.

ಸಮಾಜಿಕ ಕಾರ್ಯಕರ್ತರಾದ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ, ನಾವು ನ್ಯಾಯಕ್ಕಾಗಿ ಬೇಡುತ್ತಿದ್ದೇವೆ. ಮಗುವನ್ನು ರಕ್ಷಿಸುವಲ್ಲಿ ನಾವು ವಿಫಲರಾಗಿದ್ದೇವೆ ಎಂಬುದಕ್ಕೆ ನಾಚಿಕೆಪಡುತ್ತೇನೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲ್ಲಲಾಗಿದೆ. ಆದರೆ ಅಮಾಯಕನೊಬ್ಬನನ್ನು ಬಂಧಿಸಲಾಗಿತ್ತು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನ್ಯಾಯಕ್ಕಾಗಿ ಹೋರಾಟ ಆರಂಭವಾಗಿದ್ದು, ಈಗ ದಕ್ಷಿಣ ಕನ್ನಡಕ್ಕೂ ಬಂದಿದೆ. ತಪ್ಪಿತಸ್ಥರು, ಅವರನ್ನು ರಕ್ಷಿಸಿದ ಪ್ರಭಾವಿ ವ್ಯಕ್ತಿಗಳು ಮತ್ತು ಸಾಕ್ಷ್ಯ ನಾಶಪಡಿಸಿದ ಪೊಲೀಸ್ ಅಧಿಕಾರಿಗಳಿಗೆ ಶಿಕ್ಷೆಯಾಗಬೇಕು,'' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT