ಬಂಧಿತ ಆರೋಪಿಗಳು 
ರಾಜ್ಯ

ಪ್ರವಾದಿ ಪೈಗಂಬರ್‌ರನ್ನು ಅವಮಾನಿಸಿದ್ರೆ ಶಿರಚ್ಛೇದ ಬೆದರಿಕೆ: ಸಾಮಾಜಿಕ ಮಾಧ್ಯಮದ ಪ್ರಭಾವಿ, ಸಹಚರನ ಬಂಧನ

ಪ್ರವಾದಿ ಮುಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕುವ ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಆತನ ಸಹಚರನನ್ನು ಪೊಲೀಸರು ಇಂದು ಯಾದಗಿರಿ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ಯಾದಗಿರಿ: ಪ್ರವಾದಿ ಮುಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕುವ ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಆತನ ಸಹಚರನನ್ನು ಪೊಲೀಸರು ಇಂದು ಯಾದಗಿರಿ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ಬಂಧಿತರನ್ನು ಆಶನಾಳ ಗ್ರಾಮದ ನಿವಾಸಿ 23 ವರ್ಷದ ಅಕ್ಬರ್ ಸೈಯದ್ ಬಹದ್ದೂರ್ ಅಲಿ ಮತ್ತು ಯಾದಗಿರಿ ಸಮೀಪದ ಹತ್ತಿಕುಣಿ ಕ್ರಾಸ್ ನಿವಾಸಿ 21 ವರ್ಷದ ಮೊಹಮ್ಮದ್ ಅಯಾಜ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಯಾದಗಿರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 153ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದೂ ಸಂಘಟನೆಗಳು ಮತ್ತು ಕಾರ್ಯಕರ್ತರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದರು. ಹಿಂದೂ ಜನ ಜಾಗೃತಿ ಸಮಿತಿಯ ಹಿರಿಯ ಮುಖಂಡ ಮೋಹನ್ ಗೌಡ ಕೂಡ ಅಲಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕರೆ ನೀಡಿದ್ದರು.

ಪ್ರವಾದಿ ಮೊಹಮ್ಮದ್‌ಗೆ ಅಗೌರವ ತೋರುವವರ ಶಿರಚ್ಛೇದ ಮಾಡುವಂತೆ ಅಲಿ ತನ್ನ ಸಮುದಾಯದವರನ್ನು ಒತ್ತಾಯಿಸಿದ್ದನು. ದ್ವೇಷದ ಸಂದೇಶಗಳನ್ನು ಹರಡಲು ಅಯಾಜ್ ವೀಡಿಯೊಗಳಲ್ಲಿ ಕಾಣಿಸಿಕೊಂಡಿದ್ದನು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT