ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: BBMP ಮಾಜಿ ಕಾರ್ಪೋರೇಟರ್‌ ಪುತ್ರ ನೇಣಿಗೆ ಶರಣು

ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್‌ ರೊಬ್ಬರ ಪುತ್ರ ಮನೆಯಲ್ಲಿ ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಗುರುವಾರ ನಡೆದಿದೆ.

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್‌ ರೊಬ್ಬರ ಪುತ್ರ ಮನೆಯಲ್ಲಿ ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಗುರುವಾರ ನಡೆದಿದೆ.

ಬೆಂಗಳೂರು ಮಹಾನಗರ ಪಾಲಿಕೆಯ ಅತ್ತಿಗುಪ್ಪೆ ವಾರ್ಡ್ ನ ಮಾಜಿ ಕಾರ್ಪೋರೇಟರ್‌ ದೊಡ್ಡಯ್ಯ ಎಂಬುವವರ ಪುತ್ರ ಗೌತಮ್ (29 ವರ್ಷ) ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌತಮ್ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾಂಗ್ರೆಸ್ ಪಕ್ಷದಿಂದ ದೊಡ್ಡಯ್ಯ ಬೆಂಗಳೂರು ಮಹಾನಗರ ಪಾಲಿಕೆಗೆ ಕಾರ್ಪೊರೇಟರ್ ಆಗಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ಮಾಡುತ್ತಿದ್ದು, ಸಾವಿಗೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಈ ವಿಚಾರವಾಗಿ ಗೌತಮ್ ಅವರ ತಂದೆ ಪೊಲೀಸ್ ದೂರು ದಾಖಲಿಸಿದ್ದು, ದೂರಿನಲ್ಲಿ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ದೂರಿನಲ್ಲಿರುವಂತೆ ದೊಡ್ಡಯ್ಯ ಅವರ ಕಿರಿಯ ಪುತ್ರ ಆಗಿರುವ ಗೌತಮ್‌, ಬಿಬಿಎಂಪಿ ಗುತ್ತಿಗೆದಾರನಲ್ಲ. ಆದರೆ ಆತ ಬಿಬಿಎಂಪಿಯಲ್ಲಿ ಸಾಕಷ್ಟು ಗುತ್ತಿಗೆದಾರರಿಗೆ ಹಣವನ್ನು ಕೊಟ್ಟಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ತಮ್ಮ ಪುತ್ರ ಗುತ್ತಿಗೆದಾರನಲ್ಲ. ಅವನ ಹೆಸರಲ್ಲಿ ಯಾವುದೇ ಗುತ್ತಿಗೆದಾರರ ಪರವಾನಗಿ ಇಲ್ಲ. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು. ಗೌತಮ್‌ಗೆ ಮದುವೆ ಮಾಡಲು ಎರಡು ತಿಂಗಳಿಂದ ಹೆಣ್ಣು ಹುಡುಕುತ್ತಿದ್ದೆವು. ಕೆಲವು ದಿನಗಳಿಂದ ಆತ ಯಾರ ಬಳಿಯೂ ಮಾತನಾಡುತ್ತಿರಲಿಲ್ಲ. ನಾವು ಎಷ್ಟೇ ಕೇಳಿದರೂ ಯಾವುದೇ ಮಾಹಿತಿಯನ್ನೂ ನೀಡುತ್ತಿರಲಿಲ್ಲ. ಆದರೂ, ಸ್ವಲ್ಪ ದಿನಕ್ಕೆ ಸರಿಹೋಗುತ್ತದೆ ಎಂದು ನಾವು ಸುಮ್ಮನಿದ್ದೆವು. ಜೊತೆಗೆ, ಮದುವೆ ಮಾಡಿದರೆ ಸರಿ ಹೋಗುತ್ತದೆ ಎಂದು ಕಳೆದ ಎರಡು ತಿಂಗಳಿಂದ ಹುಡುಗಿ ಹುಡುಕಾಟ ಮಾಡುತ್ತಿದ್ದೆವು.

ಆದರೂ, ಮಗ ಮನೆಯೊಂದಿಗೆ ಯಾರೊಂದಿಗೂ ಮಾತನಾಡದೇ ಸುಮ್ಮನೇ ಇರುತ್ತಿದ್ದನು. ಮನೆಯವರೊಂದಿಗೆ ನಿನ್ನೆ ಮಧ್ಯಾಹ್ನ ಊಟ ಮಾಡಿ ರೂಮಿಗೆ ತೆರಳಿದ್ದನು. ಇದಾದ ನಂತರ, ಬಾಗಿಲು ತೆರೆದು ಹೊರಗೆ ಬಂದಿರಲಿಲ್ಲ. ಮಧ್ಯಾಹ್ನ ಊಟಕ್ಕೆ ಕರೆಯೋಕೆ ರೂಮಿಗೆ ಹೋದಾಗ ಬಾಗಿಲು ತೆರೆಯಲಿಲ್ಲ. ಜೊತೆಗೆ, ಕರೆ ಮಾಡಿದರೂ ಫೋನ್‌ ಸ್ವಿಚ್‌ ಆಫ್‌ ಆಗಿತ್ತು. ಬಾಗಿಲು ತೆಗೆದು ನೋಡಿದರೆ ಹೀಗೆ ದುರಂತ ಸಂಭವಿಸಿತ್ತು ಎಂದು ದೊಡ್ಡಯ್ಯ ತಮ್ಮ ದೂರನಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT