ನಟ ಸುದೀಪ್ 
ರಾಜ್ಯ

ಮಾನನಷ್ಟ ಮೊಕದ್ದಮೆ ಪ್ರಕರಣ: ಹೇಳಿಕೆ ದಾಖಲಿಸಿದ ನಟ ಸುದೀಪ್, ಆದೇಶ ಕಾಯ್ದಿರಿಸಿದ ಕೋರ್ಟ್

ನಿರ್ಮಾಪಕ ಎಂ.ಎನ್. ಕುಮಾರ್ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರಾದ ನಟ ಸುದೀಪ್ ಗುರುವಾರ ಹೇಳಿಕೆ ದಾಖಲಿಸಿದ್ದಾರೆ.

ಬೆಂಗಳೂರು: ನಿರ್ಮಾಪಕ ಎಂ.ಎನ್. ಕುಮಾರ್ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರಾದ ನಟ ಸುದೀಪ್ ಗುರುವಾರ ಹೇಳಿಕೆ ದಾಖಲಿಸಿದ್ದಾರೆ.

ನಗರದ 13 ನೇ ಎಸಿಎಂಎಂ ಕೋರ್ಟ್ ಗೆ ಖುದ್ದು ಹಾಜರಾಗಿ ನಟ ಸುದೀಪ್ ಗುರುವಾರ ತಮ್ಮ ಸ್ವಯಂ ಹೇಳಿಕೆ ದಾಖಲಿಸಿದರು. ನ್ಯಾಯಾಧೀಶ ವೆಂಕಣ್ಣ ಬಸಪ್ಪ ಹೊಸಮನಿ ಅವರು ಹೇಳಿಕೆ ದಾಖಲು ಮಾಡಿಕೊಂಡು ಆದೇಶವನ್ನು ಶುಕ್ರವಾರಕ್ಕೆ (ಆ.11) ಕಾಯ್ದಿರಿಸಿದ್ದಾರೆ. 

ನಟ ಸುದೀಪ್ ತಮ್ಮ ಹೇಳಿಕೆಯಲ್ಲಿ, ನಿರ್ಮಾಪಕ ಎಂ.ಎನ್. ಕುಮಾರ್ ಮಾಧ್ಯಮ ಗೋಷ್ಟಿಯಲ್ಲಿ ನನ್ನ ವಿರುದ್ದ ಮಾಡಿರುವ ಆರೋಪಗಳೆಲ್ಲಾ ಸುಳ್ಳು. ರಾಜರಾಜೇಶ್ವರಿ ನಗರದಲ್ಲಿ ಮನೆ ಕಟ್ಟಲು ಹಣದ ನೆರವಿನ ಆರೋಪವೂ ಸುಳ್ಳು. ಕುಮಾರ್ ಹೇಳಿಕೆಯನ್ನು ಎಂ.ಎನ್. ಸುರೇಶ್ ಬೆಂಬಲಿಸಿದ್ದಾರೆ. ಈ ಕುರಿತಾಗಿ ಹಲವರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಕುಮಾರ್ ಹೇಳಿಕೆಯಿಂದ ನಾನು ಇಷ್ಟು ವರ್ಷ ಕಷ್ಟಪಟ್ಟು ಗಳಿಸಿದ ವರ್ಚಸ್ಸಿಗೆ ಹಾನಿಯಾಗಿದೆ. ಇವರ ಮಾಧ್ಯಮ ಗೋಷ್ಟಿಯಿಂದ ನನ್ನ ಮಾನಹಾನಿಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ.

ಅಲ್ಲದೆ ತಮ್ಮ ಹೇಳಿಕೆಗೆ ಪೂರಕವಾಗಿ ಕೆಲವು ಫೋಟೊಗಳನ್ನೂ ನ್ಯಾಯಾಧೀಶರಿಗೆ ನೀಡಿದ್ದು, ಹೇಳಿಕೆ ದಾಖಲು ಮಾಡಿಕೊಂಡ ನ್ಯಾಯಾಧೀಶರು, "ಒಂದು ವೇಳೆ ನಿರ್ಮಾಪಕರು ಕ್ಷಮಾಪಣೆ ಕೇಳಿದರೆ ನೀವು ಅವರನ್ನು ಕ್ಷಮಿಸುತ್ತೀರಾ ರಾಜಿ ಸಂಧಾನ ಮಾಡಿಕೊಂಡು ಕಕ್ಷಿದಾರರಿಗೆ ಮಾದರಿಯಾಗುತ್ತೀರಾ" ಎಂದು ಪ್ರಶ್ನಿಸಿದರು. ಈ ವೇಳೆ ನಟ ಸುದೀಪ್, ಒಬ್ಬ ಸುದೀಪ್ ನನ್ನು ಬಗ್ಗಿಸಿದರೆ ಹಲವರನ್ನು ಬಗ್ಗಿಸಬಹುದು ಎಂದು ಅವರು ತಿಳಿದಂತಾಗುತ್ತದೆ" ಎಂದು ಮಾರ್ಮಿಕವಾಗಿ ಪ್ರತಿಕ್ರಿಯಿಸಿದರು.

ವಿಚಾರಣೆ ವೇಳೆ ಸುದೀಪ್ ಪರ ವಕೀಲ ಅಜಯ್ ಕಡಕೋಳ್, ಚಕ್ರವರ್ತಿ ಚಂದ್ರಚೂಡ್ ಮತ್ತು ನಿರ್ಮಾಪಕ ಜಾಕ್ ಮಂಜು ಕೂಡ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT