ಅಂಗನವಾಡಿ ಮೇಲ್ಛಾವಣಿ ಕುಸಿತ 
ರಾಜ್ಯ

ಯಾದಗಿರಿ: ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು 10 ತಿಂಗಳ ಮಗುವಿಗೆ ಗಾಯ!

ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 10 ತಿಂಗಳ ಮಗುವಿಗೆ ಗಾಯಗೊಂಡಿರುವ ಘಟನೆ  ಗುರುವಾರ ಯಾದಗಿರಿ ಜಿಲ್ಲೆಯ ಮರಕಲ್ ಗ್ರಾಮದಲ್ಲಿ ನಡೆದಿದೆ.

ಯಾದಗಿರಿ: ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 10 ತಿಂಗಳ ಮಗುವಿಗೆ ಗಾಯಗೊಂಡಿರುವ ಘಟನೆ  ಗುರುವಾರ ಯಾದಗಿರಿ ಜಿಲ್ಲೆಯ ಮರಕಲ್ ಗ್ರಾಮದಲ್ಲಿ ನಡೆದಿದೆ.

ಅಂಗನವಾಡಿ ಕೇಂದ್ರದಲ್ಲಿ ಶಿಶುಗಳಿಗೆ ಇಂದ್ರಧನುಷ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ಅಧಿಕಾರಿಗಳು ಆಯೋಜಿಸಿದ್ದರು. ಅಂಗನವಾಡಿ ಕೇಂದ್ರಕ್ಕೆ ಲಸಿಕೆ ಹಾಕಿಸಲು ಮಗುವಿನ ಜೊತೆ ಕುಟುಂಬಸ್ಥರು ಆಗಮಿಸಿದ್ದರು. ಈ ವೇಳೆ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದಿದೆ.

ಗಾಯಗೊಂಡ ಮಗು ತಲೆಗೆ ಬ್ಯಾಂಡೇಜ್ ಹಾಕಿಕೊಂಡು ನಗುತ್ತಿರುವ ಮಗುವಿನ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂದ್ರಧನುಷ್ ಕಾರ್ಯಕ್ರಮದಲ್ಲಿ ಡಿಫ್ತೀರಿಯಾ, ನಾಯಿಕೆಮ್ಮು, ನ್ಯುಮೋನಿಯಾಕ್ಕೆ ಕಾರಣವಾಗುವ ಹಿಮೋಫಿಲಸ್ ಇನ್ಫ್ಲುಯೆಂಜಾ ಟೈಪ್ ಬಿ ಮತ್ತು ಇತರ ಎಂಟು ಮಾರಣಾಂತಿಕ ಕಾಯಿಲೆಗಳ ವಿರುದ್ಧ ಲಸಿಕೆ ಹಾಕಲಾಗುತ್ತದೆ.

10 ತಿಂಗಳ ಮಗು ಕೀರ್ತಿಯನ್ನು ಇತರ ಅನೇಕ  ಮಕ್ಕಳೊಂದಿಗೆ ಅಲ್ಲಿಗೆ ಕರೆದೊಯ್ಯಲಾಯಿತು. ಲಸಿಕೆ ಕಾರ್ಯಕ್ರಮ ನಡೆಯುತ್ತಿದ್ದಾಗ ಕೇಂದ್ರದ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದೆ. ಆರಕ್ಕೂ ಹೆಚ್ಚು ಮಕ್ಕಳು ಮತ್ತು ಪೋಷಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೂರು ವರ್ಷಗಳ ಹಿಂದೆ ಕಟ್ಟಡ ನಿರ್ಮಾಣವಾಗಿದ್ದು, ಕಳಪೆ ಕಾಮಗಾರಿಯಿಂದ ಘಟನೆ ನಡೆದಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ