ಸಂಗ್ರಹ ಚಿತ್ರ 
ರಾಜ್ಯ

ಡಿ.ಕೆ.ಶಿವಕುಮಾರ್ ಯಾವುದೇ ಕಮಿಷನ್ ಕೇಳಿಲ್ಲ: ಬಿಬಿಎಂಪಿ ಗುತ್ತಿದಾರರ ಸಂಘ

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ನಮ್ಮಿಂದ ಯಾವುದೇ ಕಮಿಷನ್ ಕೇಳಿಲ್ಲ ಎಂದು ಬಿಬಿಎಂಪಿ ಗುತ್ತಿಗೆದಾರ ಸಂಘ ಸ್ಪಷ್ಟಪಡಿಸಿದೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ನಮ್ಮಿಂದ ಯಾವುದೇ ಕಮಿಷನ್ ಕೇಳಿಲ್ಲ ಎಂದು ಬಿಬಿಎಂಪಿ ಗುತ್ತಿಗೆದಾರ ಸಂಘ ಸ್ಪಷ್ಟಪಡಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಗುತ್ತಿಗೆದಾರ ಸಂಘದ ಅಧ್ಯಕ್ಷ ನಾಗೇಂದ್ರ ಅವರು, ಬಿಲ್‌ಗಳು ಏಪ್ರಿಲ್ 2021 ರಿಂದ ಜೂನ್ 2023 ರವರೆಗೆ ಬಾಕಿ ಉಳಿದಿವೆ. ಈವರೆಗೆ 2,593 ಕೋಟಿ ರೂ.ಗಳ 4,440 ವಾರ್ಡ್ ಮಟ್ಟದ ಸಿವಿಲ್ ಕಾಮಗಾರಿಗಳನ್ನು ನಡೆಸಲಾಗಿದೆ. ಕಳೆದ ಎರಡು ತಿಂಗಳಿನಿಂದ ಗುತ್ತಿಗೆದಾರ ಸಂಘದ ಸದಸ್ಯರು ಶಿವಕುಮಾರ್ ಅವರನ್ನು ಕನಿಷ್ಠ ಆರು ಬಾರಿ ಭೇಟಿ ಮಾಡಿದ್ದಾರೆ. ಈ ವೇಳೆ ಉಪ ಮುಖ್ಯಮಂತ್ರಿಗಳು ನಮ್ಮಿಂದ ಯಾವುದೇ ಕಮಿಷನ್ ಕೇಳಿಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಶಿವಕುಮಾರ್ ವಿರುದ್ಧದ ಕೇಳಿ ಬರುತ್ತಿರುವ ಆರೋಪಿಗಳು ಸತ್ಯಕ್ಕೆ ದೂರವಾಗಿವೆ ಎಂದು ತಿಳಿಸಿದ್ದಾರೆ.

ವೈಯಕ್ತಿಕ ಕಾರಣಗಳಿಗಾಗಿ ಈ ಆರೋಪಗಳನ್ನು ಮಾಡಲಾಗುತ್ತಿದೆ ಎಂದೆನಿಸುತ್ತಿದೆ. ಇಂತಹ ಆಧಾರ ರಹಿತ ಆರೋಪಗಳನ್ನು ಒಕ್ಕೊರಲಿನಿಂದ ಖಂಡಿಸುತ್ತೇವೆ ಎಂದು ಹೇಳಿದರು.

ಪ್ರಸ್ತುತ ಎದುರಾಗಿರುವ ಸಮಸ್ಯೆಗಳು ಪಾಲಿಕೆ ಮುಖ್ಯ ಆಯುಕ್ತರು ಹಾಗೂ ಬಿಬಿಎಂಪಿ ಹಣಕಾಸು ಇಲಾಖೆಯ ವಿಶೇಷ ಆಯುಕ್ತರ ಅಸಹಕಾರವೇ ಇದಕ್ಕೆ ಕಾರಣ ಎಂದು ಆರೋಪಿಸಿದರು.

ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿದೆವು. ಸಭೆ ನಡೆಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬಾಕಿ ಇರುವ ಬಿಲ್‌ಗಳನ್ನು ಶೀಘ್ರ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ನಾವು ಯಾವುದೇ ಮುಷ್ಕರಕ್ಕೆ ಕರೆ ನೀಡಿಲ್ಲ. ವಾರ್ಡ್ ಮಟ್ಟದ ಕಾಮಗಾರಿಗಳನ್ನು ಕಾರ್ಯಗತಗೊಳಿಸುವುದನ್ನು ಮುಂದುವರಿಸುತ್ತೇವೆಂದು ಸ್ಪಷ್ಟಪಡಿಸಿದರು.

ನಿನ್ನೆಯಷ್ಟೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರೊಂದಿಗೆ ಡಿಕೆ ಶಿವಕುಮಾರ್ ಅವರು ಸಭೆ ನಡೆಸಿದರು. ಈ ವೇಳೆ ಕಳೆದ 28 ತಿಂಗಳ ಬಾಕಿ ಬಿಲ್‌ಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT