ಹಳ್ಳಕ್ಕೆ ಬಿದ್ದ ಬಸ್ 
ರಾಜ್ಯ

ಮಂಡ್ಯ: ಸೂಚನಾ ಫಲಕವಿಲ್ಲದೇ ರಸ್ತೆ ಕಾಮಗಾರಿ; ಅತಿ ವೇಗದಿಂದ ಬಂದು ಹಳ್ಳಕ್ಕೆ ಬಿದ್ದ ಸಾರಿಗೆ ಬಸ್

ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಿಸಲು ತೋಡಿದ್ದ ಹಳ್ಳಕ್ಕೆ  ಅತಿವೇಗದಿಂದ ಬಂದ ಸಾರಿಗೆ ಬಸ್ ಬಿದ್ದಿದೆ. ಘಟನೆಯಲ್ಲಿ ಬಸ್ ಜಖಂಗೊಂಡಿದ್ದು ಚಾಲಕ ಸೇರಿದಂತೆ ಪ್ರಮಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಡ್ಯ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಿಸಲು ತೋಡಿದ್ದ ಹಳ್ಳಕ್ಕೆ ಅತಿವೇಗದಿಂದ ಬಂದ ಸಾರಿಗೆ ಬಸ್ ಬಿದ್ದಿದೆ. ಘಟನೆಯಲ್ಲಿ ಬಸ್ ಜಖಂಗೊಂಡಿದ್ದು ಚಾಲಕ ಸೇರಿದಂತೆ ಪ್ರಮಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಳವಳ್ಳಿ ತಾಲ್ಲೂಕಿನ ಮಾರೇಹಳ್ಳಿ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಬಸ್ ತಲಕಾಡು ಕಡೆಯಿಂದ ಮಳವಳ್ಳಿ ಕಡೆಗೆ  ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ವೇಗವಾಗಿ ಬಂದ ಬಸ್ ಸೇತುವೆ ನಿರ್ಮಾಣಕ್ಕೆ ತೆಗೆದಿದ್ದ ಹಳ್ಳಕ್ಕೆ ನುಗ್ಗಿದೆ. ಬಸ್ ಹಳ್ಳಕ್ಕೆ ಬೀಳುತ್ತಿದ್ದಂತೆ ಪಿಲ್ಲರ್‌ಗಳಿಗೆ ಹಾಕಿದ್ದ ಕಬ್ಬಿಣದ ಸಲಾಕೆಗಳು ಬಾಗಿವೆ. ಅದೃಷ್ಟವಶಾತ್ ಬಸ್ ನೇರವಾಗಿ ಹಳ್ಳಕ್ಕೆ ಇಳಿದಿದೆ.

ರಸ್ತೆ ಕಾಮಗಾರಿ ಮಾಡುವ ಸ್ಥಳದಲ್ಲಿ ರಸ್ತೆಕಾಮಗಾರಿ ನಡೆಯುತ್ತಿರುವ ಸೂಚನಾಫಲಕ ಹಾಕದೆ ಇರುವುದು ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳೀಯ ಸುಧಾಕರ ಆರೋಪಿಸಿದ್ದಾರೆ.

ಇನ್ನೂ ಚಾಲಕ ಮಹದೇವಸ್ವಾಮಿ ಮಾತನಾಡಿ, ಕಾಮಗಾರಿ ಮಾಡುತ್ತಿರುವವರ ನಿರ್ಲಕ್ಷ್ಯತೆಯಿಂದ ಈ ಅನಾಹುತ ನಡೆದಿದ್ದು, ಯಾವುದೇ ಸೂಚನಾ ಫಲಕ ಹಾಕದೆ ಈ ಅನಾಹುತಕ್ಕೆ ಕಾರಣ ಎಂದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಅಪಘಾತದಲ್ಲಿ ಚಾಲಕನಿಗೆ ತೀವ್ರ ಗಾಯಗಳಾಗಿದೆ. ಕೆಲವು ಪ್ರಯಾಣಿಕರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಚಾಲಕ ಹಾಗೂ ಪ್ರಯಾಣಿಕರಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT