125 ಕೆಜಿ ರಕ್ತ ಚಂದನ ವಶಪಡಿಸಿಕೊಂಡ ಬೆಂಗಳೂರು ಅರಣ್ಯ ಸಂಚಾರಿ ದಳದ ತಂಡ 
ರಾಜ್ಯ

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆಜಿ ರಕ್ತ ಚಂದನ ವಶ, ಇಬ್ಬರ ಬಂಧನ

ಬೆಂಗಳೂರು ಸಿಐಡಿ ಪೊಲೀಸರ (ಅರಣ್ಯ ಘಟಕ) ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 125 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು: ಬೆಂಗಳೂರು ಸಿಐಡಿ ಪೊಲೀಸರ (ಅರಣ್ಯ ಘಟಕ) ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 125 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ರಕ್ತ ಚಂದನವನ್ನು ವೇಣೂರು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಆರೋಪಿಗಳನ್ನು ಗುರುವಾಯನಕೆರೆ ನಿವಾಸಿ ದೀಕ್ಷಿತ್ ಮತ್ತು ಮಾವಿನಕಟ್ಟೆಯ ಖಾಲಿದ್ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ಸಂತೋಷ್ ತಲೆಮರೆಸಿಕೊಂಡಿದ್ದಾನೆ.

ಖಚಿತ ಮಾಹಿತಿ ಮೇರೆಗೆ ಎಎಸ್‌ಐ ಜಾನಕಿ ನೇತೃತ್ವದ ಬೆಂಗಳೂರು ಅರಣ್ಯ ಸಂಚಾರಿ ದಳದ ತಂಡವು ರಕ್ತ ಚಂದನ ಮತ್ತು ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ವೇಣೂರು ವಲಯ ಅರಣ್ಯಾಧಿಕಾರಿ ಮಹಿಮ್ ಜನ್ನು ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ. ವಶಪಡಿಸಿಕೊಂಡ ರಕ್ತ ಚಂದನ ಮತ್ತು ವಾಹನದ ಮೌಲ್ಯ ಸುಮಾರು 6.5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್