ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬೆಂಕಿ ಅವಘಡ ನಂತರ ಗಾಯಗೊಂಡ ನೌಕರರ ಸ್ಥಿತಿ 
ರಾಜ್ಯ

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ ಹೇಗಾಯಿತು? ಇಂಜಿನಿಯರ್ ಆನಂದ್ ಮಾತನಾಡಿರುವ ಆಡಿಯೊ ಬಿಡುಗಡೆ

ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಪ್ರಯೋಗಾಲಯದಲ್ಲಿ ನಿನ್ನೆ ಬೆಂಕಿ ಹತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಬಿಬಿಎಂಪಿ ಎಇಇ ಆನಂದ್ ಅವರು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಅವರೊಂದಿಗೆ ಮಾತನಾಡಿರುವ ಆಡಿಯೊ ಮಾಧ್ಯಮಗಳಿಗೆ ಸಿಕ್ಕಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಕೇಂದ್ರ ಕಚೇರಿ ಆವರಣದ ಪ್ರಯೋಗಾಲಯದಲ್ಲಿ ನಿನ್ನೆ ಶುಕ್ರವಾರ ಸಾಯಂಕಾಲ ಬೆಂಕಿ ಹತ್ತಿ ಉರಿದುಕೊಂಡು 9 ಮಂದಿ ನೌಕರರು ಸುಟ್ಟು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ ಬಿಬಿಎಂಪಿ ಎಇಇ ಆನಂದ್ ಅವರು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಅವರೊಂದಿಗೆ ಮಾತನಾಡಿರುವ ಆಡಿಯೊ ಮಾಧ್ಯಮಗಳಿಗೆ ಸಿಕ್ಕಿದೆ.

ಅದರಲ್ಲಿ ಎಇಇ ಆನಂದ್ ಘಟನೆ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದಾರೆ. ಮೊದಲಿನಿಂದಲೂ ಕಳೆದೊಂದು ವರ್ಷದಿಂದ ನಾವು ಲ್ಯಾಬ್ ಟೆಸ್ಟ್ ಮಾಡುತ್ತಿದ್ದೇವೆ. ಎಲ್ಲಾ ಸಾಂಪಲ್ ಕಲೆಕ್ಟ್ ಮಾಡಿ ಅಲ್ಲಿ ಟೆಸ್ಟ್ ಮಾಡುತ್ತೇವೆ. ಮೊದಲೇ ಅವರಿಗೆ ಟ್ರೈನಿಂಗ್ ಆಗಿದೆ. ಬೆಲ್ಜಿನ್‌ ಕೆಮಿಕಲ್‌ ಹಾಕಿ ಟೆಸ್ಟ್‌ ಮಾಡಿರುವಾಗ ಆಕಸ್ಮಿಕವಾಗಿ ಸೋರಿಕೆಯಾಗಿ ದುರ್ಘಟನೆ ಸಂಭವಿಸಿದೆ. ಬೆಲ್ಜಿನ್‌ ಹಾಕಿ ವಾಶ್ ಮಾಡುವಾಗ ಹೊರಗೆ ಹೋಗಿದೆ. ಹೋಗುವಾಗ ಲಿಂಕ್‌ ಆಗಿ ಬೆಂಕಿಯಾಗಿದೆ. ಕೆಲವೇ ಸೆಕಂಡ್‌ಗಳಲ್ಲಿ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿದೆ ಎಂದಿದ್ದಾರೆ.

ಎಂಸಿಬಿ ಆಫ್​​​​ ಮಾಡುವಾಗ ಬೆಂಕಿ ಇನ್ನೂ ಜಾಸ್ತಿಯಾಯ್ತು. ಈ ವೇಳೆ ನಾವು ಕೆಳಗೆ ಇಳಿದೆವು. ಕೆಲವರು ಮೇಲೆ ಸಿಕ್ಕಿಹಾಕಿಕೊಂಡರು. ನಾವು ಕೆಳಗೆ ಇದ್ದ ಕಾರಣ ಬಚಾವ್‌ ಆಗಿದ್ದೇವೆ. ಬಸವನಗುಡಿ ವ್ಯಾಪ್ತಿಗೆ ಸಂಬಂಧಿಸಿದ ಟಾರ್ ಸಂಗ್ರಹ ಮಾಡಿದ್ದೆವು. ಇದರ ಟೆಸ್ಟಿಂಗ್ ವೇಳೆ ಅಗ್ನಿ ಅವಘಡ ನಡೆದಿದೆ. ಆಕಸ್ಮಿಕವಾಗಿ ಈ ರೀತಿಯಾದ ಘಟನೆಯಾಗಿದೆ. ನಮ್ಮ ಹಣೆ ಬರಹ ಸರಿ ಇಲ್ಲ ಸರ್ ಎಂದು ಎಇಇ ಆನಂದ್​​ ದೂರವಾಣಿ ಕರೆಯಲ್ಲಿ ಅಮೃತ್ ರಾಜ್ ಜೊತೆ ಮಾತನಾಡಿದ್ದಾರೆ. 

ಬಿಬಿಎಂಪಿ(BBMP) ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, 9 ಜನ ಬಿಬಿಎಂಪಿ ನೌಕರಿಗೆ ತೀವ್ರ ರೀತಿಯಲ್ಲಿ ಸುಟ್ಟ ಗಾಯಗಳಾಗಿವೆ. ಈ ಘಟನೆ ಸಂಬಂಧ ಮೂರು ಆಯಾಮಗಳಲ್ಲಿ ತನಿಖೆ ನಡೆಸುವಂತೆ ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿ ಮೂರು ಹಂತಗಳಲ್ಲಿ ತನಿಖೆ ಆರಂಭವಾಗಿದೆ. ಡಿಸಿಪಿ ನೇತೃತ್ವದಲ್ಲಿ ಪೊಲೀಸ್ ತನಿಖೆ ಆರಂಭವಾಗಿದೆ. ಎಲೆಕ್ಟ್ರಿಕಲ್ ಇಂಜಿನಿಯರ್ ನೇತೃತ್ವದಲ್ಲಿ ಮತ್ತೊಂದು ತನಿಖೆ ಹಾಗೂ ಬಿಬಿಎಂಪಿ ಪ್ರಧಾನ ಅಭಿಯಂತರರ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಬಿಬಿಎಂಪಿ ಕಾಮಗಾರಿಗಳ ಗುಣಮಟ್ಟ ತನಿಖೆಗೆ ಎಸ್ ಐಟಿ ರಚಿಸಲಾಗಿದೆ.

ಇಬ್ಬರ ಸ್ಥಿತಿ ಗಂಭೀರ: ಅವಘಡದಲ್ಲಿ ಗಾಯಗೊಂಡಿರುವ ಒಂಬತ್ತು ಜನ ಸಿಬ್ಬಂದಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು 48 ಗಂಟೆಗಳ ಕಾಲ ತೀರ್ವ ನಿಗಾ ಘಟಕದಲ್ಲಿ ಇರಿಸಲಾಗಿದೆ. ಸದ್ಯ ಎಲ್ಲಾ ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ. ಒಂಬತ್ತು ಜನರಲ್ಲಿ ಕಿರಣ್ ಮತ್ತು ಜ್ಯೋತಿ ಪರಿಸ್ಥಿತಿ ಗಂಭೀರವಾಗಿದೆ. ಇಬ್ಬರಿಗೂ ಐಸಿಯುನಲ್ಲಿ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ನಿರ್ದೇಶಕ ರಮೇಶ್ ಕೃಷ್ಣ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT