ಸಂಗ್ರಹ ಚಿತ್ರ 
ರಾಜ್ಯ

7.42 ಕೆಜಿ ತೂಕದ ಆನೆ ದಂತ ಮಾರಾಟಕ್ಕೆ ಯತ್ನ: ಓರ್ವನ ಬಂಧನ

7.42 ಕೆಜಿ ತೂಕದ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನ ನಡೆಸಿದ್ದ ಆರೋಪಿಯನ್ನು ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: 7.42 ಕೆಜಿ ತೂಕದ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನ ನಡೆಸಿದ್ದ ಆರೋಪಿಯನ್ನು ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಜೆಸಿ ನಗರದ ಶ್ರೀಶೈಲ (25) ಬಂಧಿತ ಆರೋಪಿಯಾಗಿದ್ದಾನೆ. ಈದರಿಂದ 7.42 ಕೆಜಿ ತೂಕದ ಐದು ಆನೆ ದಂತದ ತುಂಡುಗಳನ್ನು ಜಪ್ತಿ ಮಾಡಲಾಗಿದೆ.

ಯಶವಂತಪುರ ಕೈಗಾರಿಕಾ ಪ್ರದೇಶದ ಉಲ್ಲಾಸ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನ ನಡೆಸುತ್ತಿದ್ದಾನೆಂಬ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಈ ವೇಳೆ ಓರ್ವನನ್ನು ಬಂಧನಕ್ಕೊಳಪಡಿಸಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸುವ ಪ್ರಯತ್ನಗಳು ಮುಂದುವರೆದಿವೆ.

ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆಗಳು ಮುಂದುವರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT