ಕೆ ಹೆಚ್ ಮುನಿಯಪ್ಪ(ಸಂಗ್ರಹ ಚಿತ್ರ) 
ರಾಜ್ಯ

ಪಡಿತರ ಚೀಟಿದಾರರ ಮನೆ ಬಾಗಿಲಿಗೆ ರೇಷನ್ ವಿತರಿಸುವ ಆಂಧ್ರ ಸರ್ಕಾರದ ವ್ಯವಸ್ಥೆ ಉತ್ತಮವಾಗಿದೆ: ಕೆ ಹೆಚ್ ಮುನಿಯಪ್ಪ

ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ಪಡಿತರ ಚೀಟಿದಾರರ ಮನೆ ಬಾಗಿಲಿಗೆ ಮೊಬೈಲ್ ವಿತರಣಾ ಘಟಕಗಳ ಮೂಲಕ (Door delivery vehicles) ಪಡಿತರವನ್ನು ತಲುಪಿಸುವ ಆಂಧ್ರಪ್ರದೇಶ ಸರ್ಕಾರದ ವ್ಯವಸ್ಥೆ ಉತ್ತಮವಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ವಿಜಯವಾಡ: ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ಪಡಿತರ ಚೀಟಿದಾರರ ಮನೆ ಬಾಗಿಲಿಗೆ ಮೊಬೈಲ್ ವಿತರಣಾ ಘಟಕಗಳ ಮೂಲಕ (Door delivery vehicles) ಪಡಿತರವನ್ನು ತಲುಪಿಸುವ ಆಂಧ್ರಪ್ರದೇಶ ಸರ್ಕಾರದ ವ್ಯವಸ್ಥೆ ಉತ್ತಮವಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ತಮ್ಮ ವೈಯಕ್ತಿಕ ಕೆಲಸದ ನಿಮಿತ್ತ ವಿಜಯವಾಡಕ್ಕೆ ಬಂದಿದ್ದ ಮುನಿಯಪ್ಪ ಅವರು ನಿನ್ನೆ ಆಂಧ್ರ ಪ್ರದೇಶ ರಾಜ್ಯ ನಾಗರಿಕ ಸರಬರಾಜು ಇಲಾಖೆ ಪ್ರಧಾನ ಕಚೇರಿಗೆ ಭೇಟಿ ನೀಡಿದರು. ಅವರನ್ನು ಸ್ವಾಗತಿಸಿದ ಆಂಧ್ರ ಪ್ರದೇಶ ನಾಗರಿಕ ಸರಬರಾಜು ಸಚಿವ ಕರುಮುರಿ ವೆಂಕಟ ನಾಗೇಶ್ವರ ರಾವ್ ಅವರು ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆಯನ್ನು ಮಾಡುವ ವ್ಯವಸ್ಥೆಯನ್ನು ವಿವರಿಸಿದರು. 

ಮೊಬೈಲ್ ವಿತರಣಾ ಘಟಕಗಳನ್ನು ಪರಿಶೀಲಿಸಿದ ನಂತರ, ಮುನಿಯಪ್ಪ ಅವರು ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ನಂತರ ಕರ್ನಾಟಕದಲ್ಲಿ ಇದೇ ರೀತಿಯ ವ್ಯವಸ್ಥೆಯನ್ನು ಜಾರಿಗೆ ತರಲು ಪ್ರಯತ್ನಿಸುವುದಾಗಿ ಹೇಳಿದರು.

ಮುನಿಯಪ್ಪ ಅವರು ನಾಗರಿಕ ಸರಬರಾಜು ಗೋದಾಮು ಮತ್ತು ವಿತರಣೆಗೆ ಸಿದ್ಧವಾಗಿರುವ ಪಡಿತರ ದಾಸ್ತಾನು ಪರಿಶೀಲಿಸಿದರು. ಸಾರ್ವಜನಿಕ ಆರೋಗ್ಯಕ್ಕೆ ಒತ್ತು ನೀಡುವ ಮೂಲಕ ರಾಯಲಸೀಮಾ ಪ್ರದೇಶದಲ್ಲಿ ಪ್ರಾಯೋಗಿಕ ಆಧಾರದ ಮೇಲೆ ರಾಗಿ ವಿತರಿಸುವ ಆಂಧ್ರ ಸರ್ಕಾರದ ಉಪಕ್ರಮವನ್ನು ಶ್ಲಾಘಿಸಿದರು. 

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಸಾರವರ್ಧಿತ ಅಕ್ಕಿಯ ಪೂರೈಕೆಯಿಂದ ಜನರು ಹೇರಳವಾದ ಪೋಷಕಾಂಶಗಳನ್ನು ಪಡೆಯುತ್ತಾರೆ ಎಂದು ಗಮನಿಸಿದ ಸಚಿವರು, ಮಧ್ಯಾಹ್ನದ ಊಟದಲ್ಲಿ ಬಲವರ್ಧಿತ ಅಕ್ಕಿಯನ್ನು ನೀಡುವುದರಿಂದ ಶಾಲಾ ಮಕ್ಕಳು ಹೆಚ್ಚು ಆರೋಗ್ಯವಂತರಾಗಿರುತ್ತಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT