ಸಿಎಂ ಭೇಟಿಯಾದ ಸಂತೋಷ್ ಪಾಟೀಲ್ ಕುಟುಂಬ 
ರಾಜ್ಯ

ಈಶ್ವರಪ್ಪಗೆ ಮತ್ತೆ ಸಂಕಷ್ಟ?: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ತನಿಖೆ ಸಿಐಡಿಗೆ ವಹಿಸಲು ಕುಟುಂಬಸ್ಥರ ಮನವಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಮೃತ ಸಂತೋಷ್ ಪಾಟೀಲ್ ಕುಟುಂಬಸ್ಥರು ಶುಕ್ರವಾರ ಭೇಟಿಯಾಗಿದ್ದಾರೆ. ಈ ವೇಳೆ ಸಿಐಡಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಮೃತ ಸಂತೋಷ್ ಪಾಟೀಲ್ ಕುಟುಂಬಸ್ಥರು ಶುಕ್ರವಾರ ಭೇಟಿಯಾಗಿದ್ದಾರೆ. ಈ ವೇಳೆ ಸಿಐಡಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ, ಪುತ್ರ, ತಾಯಿ ಪಾರ್ವತಿ, ಸಹೋದರ ಪ್ರಶಾಂತ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಬಿ ರಿಪೋರ್ಟ್ ಸಲ್ಲಿಕೆಯಿಂದ ನಮಗೆ ಅನ್ಯಾಯ ಆಗಿದೆ. ಪ್ರಕರಣವನ್ನು ಸಿಬಿಐ ಇಲ್ಲವೇ ಸಿಐಡಿಗೆ ವಹಿಸಬೇಕೆಂದು ಸಿಎಂಗೆ ಮನವಿ ಮಾಡಿದರು.

ನನ್ನ ಪತಿಯನ್ನು ಕಳೆದುಕೊಂಡೆ, ಅವರು ನಿರ್ವಹಿಸಿದ ಕಾಮಗಾರಿಗಳ ಬಾಕಿ ಬಿಲ್‌ಗಳು ನಮಗೆ ಬಂದಿಲ್ಲ, ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರೂ ಈಡೇರಿಲ್ಲ, ಇಂತಹ ಪರಿಸ್ಥಿತಿಯಲ್ಲಿ ಚಿಕ್ಕ ಮಗುವಿನೊಂದಿಗೆ ನಾನು ಹೇಗೆ ಬದುಕುವುದು? ಎಂದು ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ ಕಣ್ಣೀರು ಹಾಕುತ್ತಾ ಮುಖ್ಯಮಂತ್ರಿಗಳ ಬಳಿ ಸಮಸ್ಯೆ ತೋಡಿಕೊಂಡರು.

ಬಾಕಿ ಇರುವ ಬಿಲ್‌ಗಳನ್ನು ತೆರವುಗೊಳಿಸಲು ಒಂದೇ ಒಂದು ಸಹಿ ಹಾಕಿದರೆ ನನ್ನ ಮಗನನ್ನು ಉಳಿಸಬಹುದಿತ್ತು, ಹಾಗೆ ಮಾಡಿದ್ದರೇ ಇಂದು ಬದುಕುತ್ತಿದ್ದನು ಎಂದು ಸಂತೋಷ್ ಪಾಟೀಲ್ ತಾಯಿ ಪಾರ್ವತಿ ಹೇಳಿದರು.

ಕೆ.ಎಸ್.ಈಶ್ವರಪ್ಪ ಅವರು ನನ್ನ ಮಗನನ್ನು ಉಳಿಸಿದ್ದರೆ ಅವರು ಪುಣ್ಯ ಸಂಪಾದಿಸುತ್ತಿದ್ದರು. ಆದರೆ ಅವರು ನನ್ನ ಮಗನ ಸಾವನ್ನು ಸಂಭ್ರಮಿಸಿದರು. ಪೊಲೀಸ್ ಇಲಾಖೆಯು ಪ್ರಕರಣದಲ್ಲಿ ಅವರ ಹೆಸರನ್ನು ತೆರವುಗೊಳಿಸಿ 'ಬಿ ರಿಪೋರ್ಟ್' ನೀಡಿದೆ. ಅವರ ಕುಟುಂಬದಲ್ಲಿ ಯಾರಾದರೂ ಸಾವನ್ನಪ್ಪಿದ್ದರೆ ಅವರು ಸಿಹಿತಿಂಡಿ ತಿಂದು ಸಂತೋಷ ಪಡುತ್ತಿದ್ದರೇ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

SCROLL FOR NEXT