ಸಿಎಂ ಭೇಟಿಯಾದ ಸಂತೋಷ್ ಪಾಟೀಲ್ ಕುಟುಂಬ 
ರಾಜ್ಯ

ಈಶ್ವರಪ್ಪಗೆ ಮತ್ತೆ ಸಂಕಷ್ಟ?: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ತನಿಖೆ ಸಿಐಡಿಗೆ ವಹಿಸಲು ಕುಟುಂಬಸ್ಥರ ಮನವಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಮೃತ ಸಂತೋಷ್ ಪಾಟೀಲ್ ಕುಟುಂಬಸ್ಥರು ಶುಕ್ರವಾರ ಭೇಟಿಯಾಗಿದ್ದಾರೆ. ಈ ವೇಳೆ ಸಿಐಡಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಮೃತ ಸಂತೋಷ್ ಪಾಟೀಲ್ ಕುಟುಂಬಸ್ಥರು ಶುಕ್ರವಾರ ಭೇಟಿಯಾಗಿದ್ದಾರೆ. ಈ ವೇಳೆ ಸಿಐಡಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ, ಪುತ್ರ, ತಾಯಿ ಪಾರ್ವತಿ, ಸಹೋದರ ಪ್ರಶಾಂತ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಬಿ ರಿಪೋರ್ಟ್ ಸಲ್ಲಿಕೆಯಿಂದ ನಮಗೆ ಅನ್ಯಾಯ ಆಗಿದೆ. ಪ್ರಕರಣವನ್ನು ಸಿಬಿಐ ಇಲ್ಲವೇ ಸಿಐಡಿಗೆ ವಹಿಸಬೇಕೆಂದು ಸಿಎಂಗೆ ಮನವಿ ಮಾಡಿದರು.

ನನ್ನ ಪತಿಯನ್ನು ಕಳೆದುಕೊಂಡೆ, ಅವರು ನಿರ್ವಹಿಸಿದ ಕಾಮಗಾರಿಗಳ ಬಾಕಿ ಬಿಲ್‌ಗಳು ನಮಗೆ ಬಂದಿಲ್ಲ, ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರೂ ಈಡೇರಿಲ್ಲ, ಇಂತಹ ಪರಿಸ್ಥಿತಿಯಲ್ಲಿ ಚಿಕ್ಕ ಮಗುವಿನೊಂದಿಗೆ ನಾನು ಹೇಗೆ ಬದುಕುವುದು? ಎಂದು ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ ಕಣ್ಣೀರು ಹಾಕುತ್ತಾ ಮುಖ್ಯಮಂತ್ರಿಗಳ ಬಳಿ ಸಮಸ್ಯೆ ತೋಡಿಕೊಂಡರು.

ಬಾಕಿ ಇರುವ ಬಿಲ್‌ಗಳನ್ನು ತೆರವುಗೊಳಿಸಲು ಒಂದೇ ಒಂದು ಸಹಿ ಹಾಕಿದರೆ ನನ್ನ ಮಗನನ್ನು ಉಳಿಸಬಹುದಿತ್ತು, ಹಾಗೆ ಮಾಡಿದ್ದರೇ ಇಂದು ಬದುಕುತ್ತಿದ್ದನು ಎಂದು ಸಂತೋಷ್ ಪಾಟೀಲ್ ತಾಯಿ ಪಾರ್ವತಿ ಹೇಳಿದರು.

ಕೆ.ಎಸ್.ಈಶ್ವರಪ್ಪ ಅವರು ನನ್ನ ಮಗನನ್ನು ಉಳಿಸಿದ್ದರೆ ಅವರು ಪುಣ್ಯ ಸಂಪಾದಿಸುತ್ತಿದ್ದರು. ಆದರೆ ಅವರು ನನ್ನ ಮಗನ ಸಾವನ್ನು ಸಂಭ್ರಮಿಸಿದರು. ಪೊಲೀಸ್ ಇಲಾಖೆಯು ಪ್ರಕರಣದಲ್ಲಿ ಅವರ ಹೆಸರನ್ನು ತೆರವುಗೊಳಿಸಿ 'ಬಿ ರಿಪೋರ್ಟ್' ನೀಡಿದೆ. ಅವರ ಕುಟುಂಬದಲ್ಲಿ ಯಾರಾದರೂ ಸಾವನ್ನಪ್ಪಿದ್ದರೆ ಅವರು ಸಿಹಿತಿಂಡಿ ತಿಂದು ಸಂತೋಷ ಪಡುತ್ತಿದ್ದರೇ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT