ನಟ ಉಪೇಂದ್ರ 
ರಾಜ್ಯ

ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ- ನಟ ಉಪೇಂದ್ರ

ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಆರೋಪ ಮಾಡಲಾಗಿದ್ದು ಎಫ್​ಐಆರ್ ದಾಖಲಾಗಿದೆ. . ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಲೈವ್ ಬಂದಿದ್ದ ನಟ ‘ಊರೆಂದ ಮೇಲೆ ಹೊಲಗೇರಿ ಇದ್ದೇ ಇರುತ್ತದೆ’ ಎಂದಿದ್ದರು.

ಬೆಂಗಳೂರು: ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಆರೋಪ ಮಾಡಲಾಗಿದ್ದು ಎಫ್​ಐಆರ್ ದಾಖಲಾಗಿದೆ. . ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಲೈವ್ ಬಂದಿದ್ದ ನಟ ‘ಊರೆಂದ ಮೇಲೆ ಹೊಲಗೇರಿ ಇದ್ದೇ ಇರುತ್ತದೆ’ ಎಂದಿದ್ದರು.

ಹೊಲಗೇರಿ ಪದ ಬಳಕೆ ಬಗ್ಗೆ ದಲಿತ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿ ನಟನನ್ನು ತರಾಟೆಗೆ ತೆಗೆದುಕೊಂಡಿದ್ದವು. ಇದಾದ ಕೆಲವೇ ಗಂಟೆಗಳಲ್ಲಿ ಉಪೇಂದ್ರ ಕ್ಷಮೆ ಯಾಚಿಸಿದ್ದರು. ಆದರೆ, ಇಂದು ಸಹ ರಾಮನಗರದಲ್ಲಿ ಉಪ್ಪಿ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ಜೊತೆಗೆ ಎರಡು ಪ್ರತ್ಯೇಕ ದೂರುಗಳು ದಾಖಲಾಗಿ. ಎಫ್​ಐಆರ್ ಸಹ ನೊಂದಣಿಯಾಗಿದೆ.

ಉಪೇಂದ್ರ ಅವರ ಹೇಳಿಕೆ ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಅವರು ಸಿಕೆ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಜೊತೆಗೆ ಬಿಆರ್ ಭಾಸ್ಕರ್ ರಾವ್ ಹಾಗೂ ಇನ್ನೂ ಕೆಲವರು ಹೊಸೂರು ಗೇಟ್ ಪೊಲೀಸ್ ಠಾಣೆಯಲ್ಲಿಯೂ ಉಪೇಂದ್ರ ವಿರುದ್ಧ ದೂರು ದಾಖಲು ಮಾಡಿದ್ದಾರೆ.

 ಪ್ರತಿಭಟನೆ, ಎರಡು ದೂರು ದಾಖಲಾದ ಬೆನ್ನಲ್ಲೇ ಈ ಬಗ್ಗೆ ಟ್ವೀಟ್ ಮಾಡಿರುವ ಉಪೇಂದ್ರ, 50 ವರ್ಷಗಳ ಹಿಂದೆ  ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ.. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ ? ನನಗೆ ಹುಚ್ಚೇ ? ಅದಕ್ಕೆ ಕಾರಣವಾದರೂ ಏನು ? ಅದರಿಂದ ನನಗೆ ಸಿಗುವ ಲಾಭವಾದರೂ ಏನು ? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ಯಾಕೆ ಇಷ್ಟೊಂದು ದ್ವೇಷ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT