ಬಂಧಿತ ಆರೋಪಿ. 
ರಾಜ್ಯ

ಅತ್ಯಾಚಾರಕ್ಕೆ ವಿರೋಧಿಸಿದ್ದಕ್ಕೆ ಯುವತಿಯ ಹತ್ಯೆ: ಆರೋಪಿ ಬಂಧನ

ನಾಪತ್ತೆಯಾಗಿದ್ದ ಯುವತಿ, ಶವವಾಗಿ ಪತ್ತೆಯಾಗಿದ್ದ ಪ್ರಕರಣ ಬೇಧಿಸಿರುವ ಮಹದೇವಪುರ ಠಾಣೆ ಪೊಲೀಸರು, ಪಕ್ಕದ ಮನೆಯಲ್ಲಿಯೇ ನೆಲೆಸಿದ್ದ ಹಂತಕನನ್ನು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ನಾಪತ್ತೆಯಾಗಿದ್ದ ಯುವತಿ, ಶವವಾಗಿ ಪತ್ತೆಯಾಗಿದ್ದ ಪ್ರಕರಣ ಬೇಧಿಸಿರುವ ಮಹದೇವಪುರ ಠಾಣೆ ಪೊಲೀಸರು, ಪಕ್ಕದ ಮನೆಯಲ್ಲಿಯೇ ನೆಲೆಸಿದ್ದ ಹಂತಕನನ್ನು ಬಂಧನಕ್ಕೊಳಪಡಿಸಿದ್ದಾರೆ.

ಮಹೇಶ್ವರಿ ನಗರದ ನವಾಸಿ ಕೃಷ್ಣ ಚಂದ್ರ ಸೇತಿ (28) ಬಂಧತ ಆರೋಪಿಯಾಗಿದ್ದಾನೆ. ಗುರುವಾರ ರಾತ್ರಿ ಪಕ್ಕದ ಮನೆಯ ಮಹಾನಂದಾ (21) ಅವರನ್ನು ಮನೆಯೊಳಗೆ ಎಳೆದುಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವೇಳೆ ಆಕೆ ಜೋರಾಗಿ ಚೀರಾಡಿ ಪ್ರತಿರೋಧವೊಡ್ಡಿದಾಗ ಆಕೆ ಕುತ್ತಿಗೆಗೆ ಧರಿಸಿದ್ದ ದಾರವನ್ನೇ ಬಿರಿಯಾಗಿ ಹಿಡಿದು, ಬಾಯಿ ಮುಚ್ಚಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದ. ಬಳಿಕ ಶವವನ್ನು ಡ್ರಮ್ ನಲ್ಲಿ ಇರಿಸಿದ್ದ ಆರೋಪಿ, ಮುಂಜಾನೆ ಮೃತದೇಹವನ್ನು ಆಕೆ ಮನೆ ಎದುರು ಎಸೆದು ಮನೆ ಸೇರಿಕೊಂಡಿದ್ದ.

ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ಕಾರ್ಯಾಚಱಣೆ ನಡೆಸಿದ ಪೊಲೀಸರು, ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಕಲಬುರಗಿ ಮೂಲಕ ಮಹಾನಂದಾ ಮತ್ತು ಆಕೆಯ ಅಕ್ಕ ಸರೋಜಾ ಮಹದೇವಪುರ ಮಹೇಶ್ವರಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ಇಲ್ಲಿನ ಖಾಸಗಿ ಪೆಟ್ರೋಲ್ ಬಂಕ್ ವೊಂದರಲ್ಲಿ ಸಹೋದರಿಯರು ಕೆಲಸ ಮಾಡುತ್ತಿದ್ದರು. ಗುರುವಾರ ರಾತ್ರಿ ಏಕಾಏಕಿ ಮಹಾನಂದಾ ನಾಪತ್ತೆಯಾಗಿದ್ದಳು. ಎಲ್ಲೆಡೆ ಹುಡುಕಾಡಿದ ಆಕ್ಕ ಸರೋಜಾ ರಾತ್ರಿ 12ಕ್ಕೆ ಮಹದೇವಪುರ ಠಾಣೆಗೆ ತೆರಳಿ ತಂಗಿ ನಾಪತ್ತೆ ಬಗ್ಗೆ ದೂರು ನೀಡಿದ್ದರು. ಶುಕ್ರವಾರ ಮುಂಜಾನೆ 5 ಗಂಟೆಗೆ ಸಹರೋಜಾ ಮನೆಯಿಂದ ಹೊರ ಬಂದಾಗ ಆವರಣದಲ್ಲೇ ತಂಗಿ ಮಹಾನಂದಾಳ ಮೃತದೇಹ ಪತ್ತೆಯಾಗಿತ್ತು.

ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲಸರು ಮೃತದೇಹವನ್ನು ಕೂಲಂಕಷವಾಗಿ ತಪಾಸಣೆ ನಡೆಸಿದ್ದು, ಈ ವೇಳೆ ಮಹಾನಂದಾಳ ಚಪ್ಪಲಿಗಳು ಮನೆಯ ಬಳಿಯೇ ಇದ್ದವು. ಇನ್ನು ಮೃತದೇಹ ಪಾದಗಳಲ್ಲಿ ಯಾವುದೇ ಧೂಳು ಇಲ್ಲದಿರುವುದು ಕಂಡು ಬಂದಿದೆಯ ಮನೆಯ ಸುತ್ತಮುತ್ತ ಮಹಾನಂದಾಳ ಕೊಲೆಯಾಗಿದ್ದು, ಹಂತಕರು ಸಮೀಪದಲ್ಲೇ ಇರಬಹುದು ಎಂದು ಶಂಕಿಸಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ಮುಂದುವರೆಸಿದ ಪೊಲೀಸರು ಅಕ್ಕಪಕ್ಕದ ಮನೆಯವರನ್ನು ವಿಚಾರಣೆ ಮಾಡಿದ್ದಾರೆ. ನೆರೆ ಮನೆಯ ಕೃಷ್ಣಚಂದ್ರ ಸೇತಿ ನಡವಳಿಕೆ ಬಗ್ಗೆ ಅನುಮಾನ ಬಂದಿದೆ. ಈ ವೇಳೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT