ಸುಬ್ರಮಣ್ಯ ಆನೆ 
ರಾಜ್ಯ

ಮತ್ತಿಗೋಡು ಆನೆ ಶಿಬಿರದಲ್ಲಿ ಪುನರ್ವಸತಿ ಪಡೆದಿದ್ದ ಆನೆ 'ಸುಬ್ರಮಣ್ಯ' ಸಾವು

ಕೊಡಗಿನ ತಿತಿಮತಿ ಬಳಿಯ ಮತ್ತಿಗೋಡು ಆನೆ ಶಿಬಿರದಲ್ಲಿ ಪುನರ್ವಸತಿ ಪಡೆದಿದ್ದ ಆನೆ ಅಂಗಾಂಗ ವೈಫಲ್ಯದಿಂದ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಹುಣಸೂರು ವಿಭಾಗ ಮತ್ತು ತಿತಿಮತಿ ವಿಭಾಗದ ಅರಣ್ಯಾಧಿಕಾರಿಗಳು ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಅರಣ್ಯ ವ್ಯಾಪ್ತಿಯಲ್ಲಿ ಮೃತದೇಹವನ್ನು ಹೂಳಲಾಯಿತು. 

ಮಡಿಕೇರಿ: ಕೊಡಗಿನ ತಿತಿಮತಿ ಬಳಿಯ ಮತ್ತಿಗೋಡು ಆನೆ ಶಿಬಿರದಲ್ಲಿ ಪುನರ್ವಸತಿ ಪಡೆದಿದ್ದ ಆನೆ ಅಂಗಾಂಗ ವೈಫಲ್ಯದಿಂದ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಹುಣಸೂರು ವಿಭಾಗ ಮತ್ತು ತಿತಿಮತಿ ವಿಭಾಗದ ಅರಣ್ಯಾಧಿಕಾರಿಗಳು ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಅರಣ್ಯ ವ್ಯಾಪ್ತಿಯಲ್ಲಿ ಮೃತದೇಹವನ್ನು ಹೂಳಲಾಯಿತು. 

ಈ ವರ್ಷದ ಫೆಬ್ರವರಿಯಲ್ಲಿ ಕಬಡ್ಕ ತಾಲೂಕಿನ ಸುಬ್ರಹ್ಮಣ್ಯ ಅರಣ್ಯ ವ್ಯಾಪ್ತಿಯಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದ್ದ ಈ ಆನೆಯನ್ನು ಫೆಬ್ರವರಿಯಲ್ಲಿ ಮತ್ತಿಗೋಡು ಸಾಕಾನೆ ಶಿಬಿರದ ದಸರಾ ಆನೆ ಅಭಿಮನ್ಯುವಿನ ಸಹಾಯದಿಂದ ಸೆರೆ ಹಿಡಿಯಲಾಗಿತ್ತು. ಬಳಿಕ ಮತ್ತಿಗೋಡು ಶಿಬಿರದಲ್ಲಿ ಪುನವರ್ಸತಿ ಮಾಡಲಾಗಿತ್ತು. 

ಸಂಪೂರ್ಣವಾಗಿ ಪಳಗಿದ್ದ ಆನೆಯನ್ನು ಜು.20 ರಂದು ಕ್ರಾಲ್ ನಿಂದ ಹೊರಗೆ ಬಿಡಲಾಗಿತ್ತು. ಹೊಟ್ಟೆ ತುಂಬ ಆಹಾರ ತಿಂದು ಇತರ ಆನೆಗಳ ಒಡನಾಟದಿಂದ ಉತ್ತಮವಾಗಿದ್ದ ಆನೆ ಇದಕ್ಕಿದ್ದಂತೆ ಆಗಸ್ಟ್ 11 ರಂದು ಕುಸಿದು ಬಿದ್ದಿದೆ. ಮೇಲೇಳಾಗದ ಆನೆಯನ್ನು ಸಾಕಾನೆ ಶಿಬಿರದ ವಲಯ ಅರಣ್ಯಾಧಿಕಾರಿ ದಿಲೀಪ್ ಹಾಗೂ ಸಿಬ್ಬಂದಿ ಕ್ರೇನಿನ ಸಹಾಯದಿಂದ ಮೇಲೆತ್ತಲು ಪ್ರಯತ್ನಿಸಿದ್ದಾರೆ. ಆದರೆ ಸಂಪೂರ್ಣ ನಿಶ್ಯಕ್ತಿ ಹೊಂದಿ ಮೇಲೆಳಲಾಗದೇ ಶನಿವಾರ ಮಧ್ಯಾಹ್ನ ಮೃತಪಟ್ಟಿದೆ.

ಆನೆಯು ಅಸ್ವಸ್ಥತೆಯಿಂದ ಬಳಲುತ್ತಿತ್ತು ಎಂದು ಹುಣಸೂರು ವಿಭಾಗದ ಎಸಿಎಫ್ ದಯಾನಂದ್ ದೃಢಪಡಿಸಿದ್ದಾರೆ. ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿ ಚಿಟ್ಟಿಯಪ್ಪ ಅವರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಆನೆಯನ್ನು ಮತ್ತಿಗೋಡು ಅರಣ್ಯ ಪ್ರದೇಶದಲ್ಲಿ ಹೂಳಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT