ಸಿಎಂ ಸಿದ್ದರಾಮಯ್ಯ 
ರಾಜ್ಯ

ಕಾವೇರಿ ವಿವಾದ: ತಮಿಳುನಾಡಿನ ಕ್ಯಾತೆ ಸಲ್ಲದು, ಸಂಕಷ್ಟದ ಸೂತ್ರ ಪಾಲಿಸಬೇಕು; ಸಿಎಂ ಸಿದ್ದರಾಮಯ್ಯ

ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಮಟ್ಟದ ಮಳೆ ಆಗಿಲ್ಲ. ಆದ್ದರಿಂದ ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸಂಕಷ್ಟ ಸೂತ್ರವನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳೆರಡೂ ಪಾಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಮೈಸೂರು: ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಮಟ್ಟದ ಮಳೆ ಆಗಿಲ್ಲ. ಆದ್ದರಿಂದ ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸಂಕಷ್ಟ ಸೂತ್ರವನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳೆರಡೂ ಪಾಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾವೇರಿ ನದಿ ಅಚ್ಚುಕಟ್ಟು ಪ್ರದೇಶದ ಜಲಾಶಯಗಳಲ್ಲಿ ನೀರಿಲ್ಲ. ಆದಾಗ್ಯೂ ತಮಿಳುನಾಡು ಸರ್ಕಾರವು ಕಾವೇರಿ ನದಿ ನೀರು ಬಿಡುವಂತೆ ಮತ್ತೆ ಕ್ಯಾತೆ ಆರಂಭಿಸಿದೆ. ಈ ಬಗ್ಗೆ ನಮ್ಮ ತಜ್ಞರ ಜತೆಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ಈ ಬಾರಿ ಸರಿಯಾಗಿ ಮಳೆಯಾಗದೇ ನಮಗೇ ತೊಂದರೆಯಾಗಿದೆ. ಕೇರಳ ಹಾಗೂ ಕೊಡಗಿನಲ್ಲಿ ಮಳೆ ಕಡಿಮೆಯಾಗಿದ್ದು, ನಮ್ಮ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ. ಹೆಚ್ಚುವರಿ ನೀರು ಬಂದಾಗಲೆಲ್ಲಾ ಅಲ್ಲಿಗೆ ಹರಿಸುತ್ತಿದ್ದೆವು. ಈ ಬಾರಿ ಕೊಡಲಾಗಿಲ್ಲ. ನಾವು ಹೆಚ್ಚುವರಿ ನೀರು ಹರಿಸಿಲ್ಲವೆಂದು ತಮಿಳುನಾಡು ತಗಾದೆ ತೆಗೆದಿದೆ. ನಮ್ಮ ಪರಿಸ್ಥಿತಿ ಹಾಗೂ ಬೆಳೆಯನ್ನೂ ನೋಡಬೇಕಲ್ಲಾ?’ ಎಂದು ತಿಳಿಸಿದರು.

ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಅಕ್ಟೋಬರ್ ವರೆಗೆ ತಿಂಗಳಿಗೆ 15 ದಿನ ನೀರು ಬಿಡಲಾಗುವುದು. ಈ ಮುಂಗಾರಿನಲ್ಲಿ ಇದೂವರೆಗೆ 1829.1ಮಿ.ಮೀ ಮಳೆಯಾಗಬೇಕಿದ್ದ ಕಬಿನಿ ಜಲಾನಯನ ಪ್ರದೇಶದಲ್ಲಿ ಕೇವಲ 881ಮಿ.ಮೀ ಮಳೆಯಾಗಿದೆ. ಇಜಕಿಂಜ ಶೇ.52ರಷ್ಟು ಕೊರತೆಯಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ಡಿಸೆಂಬರ್‌ವರೆಗೆ ನೀರಾವರಿಗೆ ನೀರು ಬಿಡಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಮತ್ತು ಇತರ ಪಟ್ಟಣಗಳ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ಕಬಿನಿಯಿಂದ 6.5 ಟಿಎಂಸಿ ಅಡಿ ನೀರಿನ ಅಗತ್ಯವಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT