ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ವೇ 
ರಾಜ್ಯ

ಶ್ರೀರಂಗಪಟ್ಟಣ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಇಬ್ಬರು ದಂಪತಿಯ ದರೋಡೆ

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮತ್ತೊಂದು ದರೋಡೆ ಘಟನೆ ವರದಿಯಾಗಿದೆ. ಶನಿವಾರ ರಾತ್ರಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ದುಷ್ಕರ್ಮಿಗಳು ದಂಪತಿಯ ಚಿನ್ನದ ಸರವನ್ನು ದೋಚಿದ್ದಾರೆ.

ಮೈಸೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮತ್ತೊಂದು ದರೋಡೆ ಘಟನೆ ವರದಿಯಾಗಿದೆ. ಶನಿವಾರ ರಾತ್ರಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ದುಷ್ಕರ್ಮಿಗಳು ದಂಪತಿಯ ಚಿನ್ನದ ಸರವನ್ನು ದೋಚಿದ್ದಾರೆ.

ಮೊದಲ ಘಟನೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗೇಟ್‌ನಲ್ಲಿರುವ ಭಾರತ್‌ ಬೆಂಚ್‌ ಕಂಪನಿ ಬಳಿ ಉಡುಪಿ ಜಿಲ್ಲೆಯ ನಿವಾಸಿಗಳಾದ ಶಿವಪ್ರಸಾದ್‌ ಮತ್ತು ಅವರ ಪತ್ನಿ ಸುಮಾ ಕಾರು ನಿಲ್ಲಿಸಿದ್ದ ವೇಳೆ ಹೆಲ್ಮೆಟ್‌ ಧರಿಸಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆಯುಧ ತೋರಿಸಿ ದಂಪತಿಗೆ ಬೆದರಿಕೆ ಹಾಕಿದ್ದು, 30 ಗ್ರಾಂ ಚಿನ್ನದ ಸರದೊಂದಿಗೆ ಪರಾರಿಯಾಗಿದ್ದಾರೆ. 

ಎರಡನೇ ಘಟನೆಯಲ್ಲಿ, ಕೋಲಾರ ಜಿಲ್ಲೆಯ ಮಾಲೂರು ನಿವಾಸಿಗಳಾದ ಡಾ.ರಕ್ಷಿತ್ ರೆಡ್ಡಿ ಮತ್ತು ಅವರ ಪತ್ನಿ ಮಾನಸ ಅವರು ತಮ್ಮ ಕಾರಿನಲ್ಲಿ ಎಕ್ಸ್‌ಪ್ರೆಸ್‌ವೇಯಲ್ಲಿ ಪ್ರಯಾಣಿಸುತ್ತಿದ್ದಾಗ ಶ್ರೀರಂಗಪಟ್ಟಣ ತಾಲೂಕಿನ ಗೌರಿಪುರದಲ್ಲಿ ಟೈರ್ ಪಂಚರ್ ಆಗಿದ್ದು, ದಂಪತಿ ಕಾರಿನಿಂದ ಕೆಳಗಿಳಿದು ಟೈರ್ ಬದಲಾಯಿಸುವ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಬೆದರಿಸಿ 40 ಗ್ರಾಂ ಚಿನ್ನದ ಸರದೊಂದಿಗೆ ಪರಾರಿಯಾಗಿದ್ದಾರೆ.

ಮಂಡ್ಯ ಎಸ್ಪಿ ಎನ್.ಯತೀಶ್ ಅಪರಾಧ ನಡೆದ ಎರಡೂ ಸ್ಥಳಗಳಿಗೆ ಭಾನುವಾರ ಭೇಟಿ ನೀಡಿದರು. ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT