ಸಾಂದರ್ಭಿಕ ಚಿತ್ರ 
ರಾಜ್ಯ

ನಂದಿಬೆಟ್ಟಕ್ಕೆ ಹೋಗುವಾಗ ನಿದ್ದೆ ಮಂಪರಿನಲ್ಲಿ ಡಿವೈಡರ್ ಗೆ ಕಾರು ಢಿಕ್ಕಿ; ಇಬ್ಬರು ವಿದ್ಯಾರ್ಥಿಗಳ ದುರ್ಮರಣ!

ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕ ಸಮೀಪದ ಹುಣಸಮಾರನಹಳ್ಳಿಯಲ್ಲಿ ನಡೆದಿದೆ. 

ಬೆಂಗಳೂರು: ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕ ಸಮೀಪದ ಹುಣಸಮಾರನಹಳ್ಳಿಯಲ್ಲಿ ನಡೆದಿದೆ. 

ಕಳೆದ ರಾತ್ರಿ ಈ ಘಟನೆ ನಡೆದಿದ್ದು ಮೃತರನ್ನು ಕಾರ್ತಿಕ್ ಜೈನ್, ಆದರ್ಶ್ ಕುಮಾರ್ ಎಂದು ಗುರುತಿಸಲಾಗಿದೆ. ಐವರು ವಿದ್ಯಾರ್ಥಿಗಳು ಶನಿವಾರ ತಡರಾತ್ರಿ ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಆದರೆ ಈಗ ಬೇಡ ಬೆಳಗ್ಗೆ ಹೋಗೋಣ ಎಂದು ವಾಪಸ್ ಬರುವಾಗ ಹುಣಸಮಾರನಹಳ್ಳಿ ಬಳಿ ಚಾಲಕ ನಿದ್ದೆ ಮಂಪರಿನಲ್ಲಿ ಡಿವೈಡರ್‌ ಡಿಕ್ಕಿ ಹೊಡೆದಿದ್ದಾನೆ.

ಇದರಿಂದ ಕಾರ್ತಿಕ್ ಜೈನ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆದರ್ಶ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT