ಅಲೋಕ್ ಕುಮಾರ್ 
ರಾಜ್ಯ

ಕರಾಳ ಶನಿವಾರ: 24 ಗಂಟೆಗಳಲ್ಲಿ ಸಂಭವಿಸಿದ ಅಪಘಾತಗಳಿಗೆ 37 ಮಂದಿ ಸಾವು; ಅಲೋಕ್ ಕುಮಾರ್ ಸಲಹೆಗಳೇನು?

ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್ ಹೇಳಿದ್ದಾರೆ.

‘Black staurday’ ಎಂಬುದಾಗಿ ಟ್ವೀಟ್ ಮಾಡಿರುವ ಅವರು, ‘ಭಾನುವಾರ ನಸುಕಿನಲ್ಲಿ ಚಿತ್ರದುರ್ಗದಲ್ಲಿ ಐವರು ಸಾವಿಗೀಡಾಗಿದ್ದಾರೆ. ಇದರಿಂದಾಗಿ, ರಾಜ್ಯದಲ್ಲಿ 24 ಗಂಟೆಯಲ್ಲಿ 37 ಮಂದಿ ಪ್ರಾಣ ಕಳೆದುಕೊಂಡಂತಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಅಪಘಾತಗಳ ಬಗ್ಗೆ ಬೇಸರ ವ್ಯಕ್ತ ಪಡಿಸಿರುವ ಅಲೋಕ್ ಕುಮಾರ್ ಪ್ರಯಾಣಿಕರಿಗೆ ಕೆಲವೊಂದು ಸಲಹೆ ನೀಡಿದ್ದಾರೆ, ಮೃತರಲ್ಲಿ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾರು ಪ್ರಯಾಣಿಕರು ಹಾಗೂ ಪಾದಚಾರಿಗಳು ಸಹ ಮೃತಪಟ್ಟಿದ್ದಾರೆ.

ಬೈಕ್‌ ಸವಾರ ಹಾಗೂ ಹಿಂಬದಿ ಸವಾರ, ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್‌ ಧರಿಸಿ ಸಂಚರಿಸಬೇಕು. ಅನನುಭವಿ ಚಾಲಕರು ರಾತ್ರಿ ಚಾಲನೆಯನ್ನು ತಪ್ಪಿಸಬೇಕು ಎಂದು ಸಲಹೆ ನೀಡಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT