ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡಾಗ ಬಿಬಿಎಂಪಿ ಕಚೇರಿಯ ಗುಣಮಟ್ಟ ನಿಯಂತ್ರಣ ಕೊಠಡಿ ಮುಂದೆ ಜಮಾಯಿಸಿದ್ದ ಜನರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ 
ರಾಜ್ಯ

ಬಿಬಿಎಂಪಿ ಅಗ್ನಿ ದುರಂತ: ಇಬ್ಬರಿಗೆ ಉಸಿರಾಟದ ತೊಂದರೆ; ತನಿಖೆಗೆ ಕಾಲಾವಕಾಶ ನೀಡಬೇಕು ಎಂದ ತುಷಾರ್ ಗಿರಿನಾಥ್

ಬಿಬಿಎಂಪಿ ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಕೊಠಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡ ಇಬ್ಬರು ರೋಗಿಗಳಿಗೆ ಉಸಿರಾಡಲು ಕಷ್ಟವಾದ ಕಾರಣ ನಸಲ್ ಕ್ಯಾತೆಟರ್‌ಗಳನ್ನು (nasal catheter) ಹಾಕಲಾಗಿದೆ. 

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಕೊಠಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡ ಇಬ್ಬರಿಗೆ ಉಸಿರಾಡಲು ಕಷ್ಟವಾದ ಕಾರಣ ನಸಲ್ ಕ್ಯಾತೆಟರ್‌ಗಳನ್ನು (nasal catheter) ಹಾಕಲಾಗಿದೆ. 

ಅಪಘಾತದ ಸಮಯದಲ್ಲಿ ಆಪರೇಟರ್ ಜ್ಯೋತಿ (26) ಮತ್ತು ಮುಖ್ಯ ಎಂಜಿನಿಯರ್ ಶಿವಕುಮಾರ್ (45) ಸೇರಿದಂತೆ ಒಂಬತ್ತು ಮಂದಿ ಬೆಂಜೀನ್ ಹೊಗೆಯನ್ನು ಉಸಿರಾಡಿದ್ದರು. 

ಬೆಂಜೀನ್ ಉಸಿರಾಡುವುದರಿಂದ ಶ್ವಾಸಕೋಶದ ಉರಿಯೂತಕ್ಕೆ (ಪಲ್ಮನರಿ ಎಡಿಮಾ) ಕಾರಣವಾಗುತ್ತದೆ. ಇದರಿಂದ ಉಸಿರಾಟದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ಇಬ್ಬರ ಪರಿಸ್ಥಿತಿ ನಿರ್ಣಾಯಕವಾಗಿದೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (BMCRI) ಡೀನ್-ನಿರ್ದೇಶಕ ಡಾ. ರಮೇಶ್ ಕೃಷ್ಣ ಹೇಳಿದ್ದಾರೆ. 

ಎಡಿಮಾ ವಿರೋಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಮತ್ತು ಇಬ್ಬರು ರೋಗಿಗಳಿಗೆ ನಸಲ್ ಕ್ಯಾತಿಟರ್‌ಗಳನ್ನು ಅಳವಡಿಸಲಾಗಿದೆ. ಅವರ ಸ್ಥಿತಿ ಹದಗೆಟ್ಟಂತೆ ಕಾಣುತ್ತಿಲ್ಲ ಎಂದು ಅವರು ಹೇಳಿದರು.

ಕಿಡ್ನಿ ಸಮಸ್ಯೆಯಿರುವ ಮತ್ತೋರ್ವ ಗಂಭೀರ ರೋಗಿಯ ಕಿರಣ್ (37) ಅವರನ್ನು ಭಾನುವಾರ ಮತ್ತೆ ಡಯಾಲಿಸಿಸ್‌ಗೆ ಒಳಪಡಿಸಲಾಗಿದೆ. ಇತರ ಆರು ರೋಗಿಗಳ ಪರಿಸ್ಥಿತಿ ಸ್ಥಿರವಾಗಿದೆ. ಮುಂದಿನ 3-4 ದಿನಗಳವರೆಗೆ ಎಲ್ಲರ ಮೇಲ್ವಿಚಾರಣೆಯನ್ನು ಮುಂದುವರಿಸಲಾಗುವುದು ಎಂದು ಬಿಎಂಸಿಆರ್‌ಐ ಪ್ರಕಟಣೆ ತಿಳಿಸಿದೆ.

ತನಿಖೆಗೆ ಅಧಿಕಾರಿಗಳಿಗೆ ಕಾಲಾವಕಾಶ ನೀಡಬೇಕು: ಬಿಬಿಎಂಪಿ ಮುಖ್ಯಸ್ಥ

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬೆಂಕಿ ಅವಘಡದ ಕುರಿತು ಭಾನುವಾರ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, 'ತನಿಖೆ ನಡೆಯುತ್ತಿದೆ. ತನಿಖೆ ನಡೆಸಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಕಾಲಾವಕಾಶ ನೀಡಬೇಕು. ವಿಸ್ತೃತ ತನಿಖೆ ಮಾಡದಿದ್ದರೆ, ವರದಿ ಅರ್ಧಂಬರ್ಧ ಆಗುವ ಸಾಧ್ಯತೆಗಳಿವೆ. ಹಾಗಾಗಿ ತನಿಖೆ ನಡೆಸಲು ಸಾಕಷ್ಟು ಕಾಲಾವಕಾಶ ನೀಡಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!