ಸಾಂದರ್ಭಿಕ ಚಿತ್ರ 
ರಾಜ್ಯ

ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿ ಪ್ರಾಂಶುಪಾಲರ ಶಾಲೆಯನ್ನೇ ಮುಚ್ಚಿಸಿದ ಶಿಕ್ಷಣ ಇಲಾಖೆ

ಬೆಂಗಳೂರಿನ ವರ್ತೂರು ಪ್ರದೇಶದಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಮಾಲೀಕ- ಪ್ರಾಂಶುಪಾಲರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಶಿಕ್ಷಣ ಇಲಾಖೆ ಶಾಲೆಗೆ ಬೀಗ ಹಾಕಿದೆ ಎಂದು ಮೂಲಗಳು ಸೋಮವಾರ ಖಚಿತಪಡಿಸಿವೆ.

ಬೆಂಗಳೂರು: ಬೆಂಗಳೂರಿನ ವರ್ತೂರು ಪ್ರದೇಶದಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಮಾಲೀಕ- ಪ್ರಾಂಶುಪಾಲರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಶಿಕ್ಷಣ ಇಲಾಖೆ ಶಾಲೆಗೆ ಬೀಗ ಹಾಕಿದೆ ಎಂದು ಮೂಲಗಳು ಸೋಮವಾರ ಖಚಿತಪಡಿಸಿವೆ.

ಮೂಲಗಳ ಪ್ರಕಾರ ಆರೋಪಿಗಳು ಕೋರಮಂಗಲ ಪ್ರದೇಶದಲ್ಲಿ ಶಾಲೆ ನಿರ್ಮಿಸಲು ಅನುಮತಿ ಪಡೆದಿದ್ದರು, ಆದರೆ ವರ್ತೂರಿನಲ್ಲಿ ಅನಧಿಕೃತವಾಗಿ ಶಾಲೆಯನ್ನು ನಿರ್ಮಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ಆದೇಶ ಹೊರಡಿಸಿದ್ದಾರೆ. ಈ ಬೆಳವಣಿಗೆಯಿಂದಾಗಿ ಈ ಶಾಲೆಯಲ್ಲಿ ಓದುತ್ತಿರುವ 140 ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಗೊಂದಲಕ್ಕೀಡಾಗಿದ್ದು, ಶಾಲೆಯ ಬದಲಿ ಬಗ್ಗೆ ಚಿಂತಿಸಿದ್ದಾರೆ. ಆ ಪ್ರದೇಶದಲ್ಲಿ ತಾವು ಆಯ್ಕೆ ಮಾಡಿದ ಶಾಲೆಯಲ್ಲಿ ತಮ್ಮ ಮಕ್ಕಳಿಗೆ  ಸೀಟು ದೊರಕಿಸಿಕೊಡುವುದಾಗಿ ಹಾಗೂ ಶುಲ್ಕವನ್ನು ಸರ್ಕಾರವೇ ನಿಗದಿಪಡಿಸಲಿದೆ ಎಂದು ಅಧಿಕಾರಿಗಳು ಪೋಷಕರಿಗೆ ಭರವಸೆ ನೀಡಿದ್ದಾರೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ. 

ಪರ್ಯಾಯ ಶಾಲೆಗಳನ್ನು ಆಯ್ಕೆ ಮಾಡಿ ತಮ್ಮ ಮಕ್ಕಳಿಗೆ ಪ್ರವೇಶ ನೀಡುವಂತೆ ಪೋಷಕರಿಗೆ ತಿಳಿಸಲಾಗಿದೆ. 2ನೇ ತರಗತಿ ಓದುತ್ತಿದ್ದ ಹತ್ತು ವರ್ಷದ ಬಾಲಕಿಯ ಮೇಲೆ ಪ್ರಾಂಶುಪಾಲರು ಆಗಸ್ಟ್ 3ರಂದು ಅತ್ಯಾಚಾರವೆಸಗಿದ್ದರು. ಪೋಷಕರ ದೂರಿನ ಮೇರೆಗೆ ಪೊಲೀಸರು ಆರೋಪಿ ಪ್ರಾಂಶುಪಾಲನನ್ನು ಬಂಧಿಸಿದ್ದರು. 

ಪೊಲೀಸರ ಪ್ರಕಾರ, ಈ ಘಟನೆ ಬಳಿಕ ಸಂತ್ರಸ್ಥ ಬಾಲಕಿ ಡಿಸ್ಲೆಕ್ಸಿಯಾ ಸಮಸ್ಯೆಯಿಂದಿಂದ ಬಳಲುತ್ತಿದ್ದಳು. ಬೆಳಗ್ಗೆ 8.30ಕ್ಕೆ ಬಾಲಕಿ ಶಾಲೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದ್ದು, ಆರೋಪಿ ಪ್ರಾಂಶುಪಾಲರು ಶಾಲೆಯ ಪಕ್ಕದಲ್ಲೇ ಇರುವ ತನ್ನ ಮನೆಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾರೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಬಳಿಕ ಆರೋಪಿಗಳು ಕೇಕ್ ನೀಡಿದ್ದರು. ಮನೆಗೆ ಬಂದ ಬಾಲಕಿ ಹೊಟ್ಟೆ ನೋವಿನ ಬಗ್ಗೆ ಪೋಷಕರಿಗೆ ದೂರು ನೀಡಿದ್ದಾಳೆ.

ಅಂಡರ್‌ವೇರ್‌ನಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿದ ತಾಯಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ನಂತರ, ಕ್ರಮೇಣ, ಹುಡುಗಿ ತನ್ನ ತಾಯಿಗೆ ನಡೆದ ಘಟನೆಗಳೆಲ್ಲವನ್ನೂ ಬಹಿರಂಗಪಡಿಸಿದಳು. ನಂತರ ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT