ಮೃತ ಯುವಕ ಕಿರಣ್. 
ರಾಜ್ಯ

ಒಟ್ಟಿಗೆ ಬದುಕುವ ಅದೃಷ್ಟವಿಲ್ಲ, ಆದರೆ, ನನ್ನ ಅಂತ್ಯಕ್ರಿಯೆಗೆ ಬರಲೇಬೇಕು: ಪ್ರಿಯತಮೆ ಆಹ್ವಾನಿಸಿ ಲೈವಲ್ಲೇ ಪ್ರಾಣಬಿಟ್ಟ ರೇಬಿಸ್‌ ಪೀಡಿತ ಯುವಕ!

ರೇಬಿಸ್‌ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊಬ್ಬ ಪ್ರಿಯತಮೆಗೆ ವಿಡಿಯೋ ಮಾಡಿ, ತನ್ನ ಅಂತ್ಯಕ್ರಿಯೆಗೆ ಆಹ್ವಾನಿಸಿ, ಲೈವ್‌ನಲ್ಲೇ ಪ್ರಾಣ ಬಿಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ರೇಬಿಸ್‌ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊಬ್ಬ ಪ್ರಿಯತಮೆಗೆ ವಿಡಿಯೋ ಮಾಡಿ, ತನ್ನ ಅಂತ್ಯಕ್ರಿಯೆಗೆ ಆಹ್ವಾನಿಸಿ, ಲೈವ್‌ನಲ್ಲೇ ಪ್ರಾಣ ಬಿಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೋಂಪುರ ಹೋಬಳಿಯ ದಾಸೇನಹಳ್ಳಿ ಗ್ರಾಮದ ಕಿರಣ್‌ (22) ಮೃತ ಯುವಕ. ಈತನಿಗೆ ಎರಡು ತಿಂಗಳ ಹಿಂದೆ ನಾಯಿ ಕಚ್ಚಿದ್ದು ಅದಕ್ಕೆ ಚಿಕಿತ್ಸೆ ಪಡೆದಿರಲಿಲ್ಲ.

ಕೊನೆಗೆ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರು ಎಳೆದಿದ್ದಾನೆ. ಈತನ್ಮಧ್ಯೆ ಸಾವು ಸಮೀಪಿಸುತ್ತಿದೆ ಎಂದು ತಿಳಿಸಿದ ಯುವಕ, ಪ್ರಿಯತಮೆಗಾಗಿ ವಿಡಿಯೋ ಮಾಡಿದ್ದಾನೆ.

ನಾನಿನ್ನು ಹೆಚ್ಚು ದಿನಗಳು ಬದುಕುವುದಿಲ್ಲ. ನಿನ್ನನ್ನು ಮದುವೆಯಾಗಿ ಒಟ್ಟಿಗೆ ಕೊನೆವರೆಗೂ ಇರುವ ಅದೃಷ್ಟ ನನಗಿಲ್ಲ. ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ. ನಿಮ್ಮ ಅಪ್ಪ ಹೇಳಿದ ಹಾಗೆ ಒಳ್ಳೆಯ ಹುಡುಗನನ್ನು ನೋಡಿ ಮದುವೆ ಆಗು. ನಿನಗೆ ಹುಟ್ಟಿದ ಮಗುವಿಗೆ ನನ್ನ ಹೆಸರೇ ಇಡಬೇಕು, ಇದು ನನ್ನ ಆಕಸ್ಮಿಕ ಸಾವು. ದಯವಿಟ್ಟು ಅಂತ್ಯಕ್ರಿಯೆಗೆ ಬಂದು ಹೋಗಬೇಕು, ಯುಮನಾ ಹಾಗೂ ನಿನ್ನ ತಾಯಿಯನ್ನು ಕರೆದುಕೊಂಡು ಬಾ...ಒಳ್ಳೆಯದಾಗಲಿ ನಿಮ್ಮ ಕುಟುಂಬಕ್ಕೆ. ಚೆನ್ನಾಗಿರಿ’ ಎಂದು ಕೈ ಮುಗಿದು ಪ್ರಾಣಬಿಟ್ಟಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT