ಮೃತ ಯುವಕ ಕಿರಣ್. 
ರಾಜ್ಯ

ಒಟ್ಟಿಗೆ ಬದುಕುವ ಅದೃಷ್ಟವಿಲ್ಲ, ಆದರೆ, ನನ್ನ ಅಂತ್ಯಕ್ರಿಯೆಗೆ ಬರಲೇಬೇಕು: ಪ್ರಿಯತಮೆ ಆಹ್ವಾನಿಸಿ ಲೈವಲ್ಲೇ ಪ್ರಾಣಬಿಟ್ಟ ರೇಬಿಸ್‌ ಪೀಡಿತ ಯುವಕ!

ರೇಬಿಸ್‌ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊಬ್ಬ ಪ್ರಿಯತಮೆಗೆ ವಿಡಿಯೋ ಮಾಡಿ, ತನ್ನ ಅಂತ್ಯಕ್ರಿಯೆಗೆ ಆಹ್ವಾನಿಸಿ, ಲೈವ್‌ನಲ್ಲೇ ಪ್ರಾಣ ಬಿಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ರೇಬಿಸ್‌ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊಬ್ಬ ಪ್ರಿಯತಮೆಗೆ ವಿಡಿಯೋ ಮಾಡಿ, ತನ್ನ ಅಂತ್ಯಕ್ರಿಯೆಗೆ ಆಹ್ವಾನಿಸಿ, ಲೈವ್‌ನಲ್ಲೇ ಪ್ರಾಣ ಬಿಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೋಂಪುರ ಹೋಬಳಿಯ ದಾಸೇನಹಳ್ಳಿ ಗ್ರಾಮದ ಕಿರಣ್‌ (22) ಮೃತ ಯುವಕ. ಈತನಿಗೆ ಎರಡು ತಿಂಗಳ ಹಿಂದೆ ನಾಯಿ ಕಚ್ಚಿದ್ದು ಅದಕ್ಕೆ ಚಿಕಿತ್ಸೆ ಪಡೆದಿರಲಿಲ್ಲ.

ಕೊನೆಗೆ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರು ಎಳೆದಿದ್ದಾನೆ. ಈತನ್ಮಧ್ಯೆ ಸಾವು ಸಮೀಪಿಸುತ್ತಿದೆ ಎಂದು ತಿಳಿಸಿದ ಯುವಕ, ಪ್ರಿಯತಮೆಗಾಗಿ ವಿಡಿಯೋ ಮಾಡಿದ್ದಾನೆ.

ನಾನಿನ್ನು ಹೆಚ್ಚು ದಿನಗಳು ಬದುಕುವುದಿಲ್ಲ. ನಿನ್ನನ್ನು ಮದುವೆಯಾಗಿ ಒಟ್ಟಿಗೆ ಕೊನೆವರೆಗೂ ಇರುವ ಅದೃಷ್ಟ ನನಗಿಲ್ಲ. ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ. ನಿಮ್ಮ ಅಪ್ಪ ಹೇಳಿದ ಹಾಗೆ ಒಳ್ಳೆಯ ಹುಡುಗನನ್ನು ನೋಡಿ ಮದುವೆ ಆಗು. ನಿನಗೆ ಹುಟ್ಟಿದ ಮಗುವಿಗೆ ನನ್ನ ಹೆಸರೇ ಇಡಬೇಕು, ಇದು ನನ್ನ ಆಕಸ್ಮಿಕ ಸಾವು. ದಯವಿಟ್ಟು ಅಂತ್ಯಕ್ರಿಯೆಗೆ ಬಂದು ಹೋಗಬೇಕು, ಯುಮನಾ ಹಾಗೂ ನಿನ್ನ ತಾಯಿಯನ್ನು ಕರೆದುಕೊಂಡು ಬಾ...ಒಳ್ಳೆಯದಾಗಲಿ ನಿಮ್ಮ ಕುಟುಂಬಕ್ಕೆ. ಚೆನ್ನಾಗಿರಿ’ ಎಂದು ಕೈ ಮುಗಿದು ಪ್ರಾಣಬಿಟ್ಟಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT