ಬೆಳಗಾವಿ: ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತಡೆದ ಪೊಲೀಸರು 
ರಾಜ್ಯ

ಬೆಳಗಾವಿ: ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತಡೆದ ಪೊಲೀಸರು

ಬೆಳಗಾವಿ ಜಿಲ್ಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜವನ್ನೂ ಹಾರಿಸುವ ಪ್ರಯತ್ನವನ್ನು ಪೊಲೀಸರು ಮಂಗಳವಾರ ತಡೆದಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜವನ್ನೂ ಹಾರಿಸುವ ಪ್ರಯತ್ನವನ್ನು ಪೊಲೀಸರು ಮಂಗಳವಾರ ತಡೆದಿದ್ದಾರೆ.

ಇಬ್ಬರು ಕಾರ್ಪೊರೇಟರ್‌ಗಳು ತಮ್ಮ ಬೆಂಬಲಿಗರೊಂದಿಗೆ ಜಿಲ್ಲೆಯ ನಿಪ್ಪಾಣಿ ನಗರದ ಪುರಸಭೆಯ ಕಟ್ಟಡದ ಮೇಲೆ ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜವನ್ನು ಹಾರಿಸಲು ಪ್ರಯತ್ನಿಸಿದರು.

ಬಿಜೆಪಿ ಸ್ಥಳೀಯ ಶಾಸಕಿ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಜಿಲ್ಲಾಡಳಿತದಿಂದ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ಬಳಿಕ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ನಿಪ್ಪಾಣಿ ಪುರಸಭೆಯ ಕಾರ್ಪೊರೇಟರ್‌ಗಳಾದ ವಿನಾಯಕ ವಾಡೆ ಮತ್ತು ಸಂಜಯ ಸಂಗಾವ್ಕರ್ ಅವರು ಕೇಸರಿ ಧ್ವಜಗಳೊಂದಿಗೆ ಬಂದು ಅದನ್ನು ಹಾರಿಸಲು ಪ್ರಯತ್ನಿಸಿದರು. ಕಾರ್ಪೊರೇಟರ್‌ಗಳಿಗೆ ಎನ್‌ಸಿಪಿ ಪಕ್ಷ ಬೆಂಬಲ ನೀಡಿದೆ. 
ಈ ವೇಳೆ ಪೊಲೀಸರು ಕಾರ್ಪೊರೇಟರ್‌ಗಳನ್ನು ತಡೆದು ವಾಪಸ್ ಕಳುಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್