ಡಿಕೆ ಶಿವಕುಮಾರ್ 
ರಾಜ್ಯ

ಕಾವೇರಿ ನೀರಿಗಾಗಿ ತಮಿಳುನಾಡು ಸುಪ್ರೀಂ ಕೋರ್ಟ್ ಗೆ ಮೊರೆ; ರಾಜ್ಯದಲ್ಲಿ ಸಾಕಷ್ಟು ನೀರಿಲ್ಲ, ಆದರೂ 10 ಟಿಎಂಸಿ ನೀರು ಬಿಡುಗಡೆ: ಡಿಕೆ ಶಿವಕುಮಾರ್

ರಾಜ್ಯದಲ್ಲಿ ಸಾಕಷ್ಟು ನೀರಿಲ್ಲ, ಆದರೂ 10 ಟಿಎಂಸಿ ನೀರು ಬಿಡುಗಡೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ನೀರಿಲ್ಲ, ಆದರೂ 10 ಟಿಎಂಸಿ ನೀರು ಬಿಡುಗಡೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕದಿಂದ ಕಾವೇರಿ ನೀರು ತಕ್ಷಣವೇ ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, "ನನಗೆ ಇದು ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ಆದರೂ ನಾವು ಪಾಲಿಸುತ್ತೇವೆ ... ನಮ್ಮಲ್ಲೇ ಸಾಕಷ್ಟು ನೀರಿಲ್ಲ.. ಆದರೆ ನಾವು ತಮಿಳುನಾಡಿಗೆ 10 ಟಿಎಂಸಿ ನೀರು ಬಿಡುಗಡೆ ಮಾಡಲಿದ್ದೇವೆ. ನಾವು ಈಗಾಗಲೇ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದ ಕುರಿತು ಮಾತನಾಡಿದರು. 'ಭಾರತದ ಬೆಳವಣಿಗೆಗೆ, ಭಾರತದ ಶಾಂತಿಗಾಗಿ ಇಂಡಿಯಾ ಮೈತ್ರಿಕೂಟ ಒಂದು ದೊಡ್ಡ ಪ್ರಯಾಣವಾಗಿದೆ ಎಂದು ನಾನು ಭಾವಿಸುತ್ತೇನೆ. ನಾವು ಭಾರತವನ್ನು ರಕ್ಷಿಸುವ ಹಾದಿಯಲ್ಲಿದ್ದೇವೆ. ನಾವೆಲ್ಲರೂ ಒಟ್ಟಿಗೆ ಸೇರೋಣ. ಭಾರತವನ್ನು ಉಳಿಸಲು ಇಡೀ ದೇಶವು ಒಗ್ಗೂಡಬೇಕೆಂದು ನಾನು ಬಯಸುತ್ತೇನೆ ಎಂದು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT