ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿನ ಸಭೆ 
ರಾಜ್ಯ

ಬೆಂಗಳೂರು, ಕೋಲಾರ ಜಿಲ್ಲೆಯ ಶಾಸಕರು, ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಭೆ

ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಯ ಶಾಸಕರು, ಸಚಿವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ಸಭೆ ನಡೆಯಿತು. 

ಬೆಂಗಳೂರು: ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಯ ಶಾಸಕರು, ಸಚಿವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ಸಭೆ ನಡೆಯಿತು. 

ಮೊದಲಿಗೆ ಬೆಂಗಳೂರು ನಗರ ಜಿಲ್ಲೆಯ ಶಾಸಕರುಗಳ ಜೊತೆಗೆ ನಡೆದ ಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳು-ಅನುದಾನ, ಸರ್ಕಾರ- ಪಕ್ಷದ ಜತೆಗಿನ ಸಮನ್ವಯ ಹಾಗೂ ಬಿಬಿಎಂಪಿ ವ್ಯಾಪ್ತಿಯ ಅಭಿವೃದ್ಧಿ ಮತ್ತು ಚುನಾವಣೆ ಕುರಿತು ಚರ್ಚೆ ನಡೆಸಿದರು.

ಸಚಿವರಾದ ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ಸಂಸದ ಡಿ ಕೆ ಸುರೇಶ್, ಶಾಸಕರಾದ ಕೃಷ್ಣಪ್ಪ, ಎ. ಸಿ. ಶ್ರೀನಿವಾಸ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಎಂಎಲ್ಸಿ ಗಳಾದ ಯು ಬಿ ವೆಂಕಟೇಶ್, ನಾಗರಾಜ್ ಯಾದವ್ ಮತ್ತಿತರರು ಉಪಸ್ಥಿತರಿದ್ದರು.

ನಂತರ ಕೋಲಾರ ಜಿಲ್ಲೆಯ ಶಾಸಕರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು. ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಲೋಕಸಭಾ ಚುನಾವಣೆ ಕುರಿತಾಗಿ ಶಾಸಕರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಎಲ್ಲಾ ಶಾಸಕರ ಸರ್ವ ಒಮ್ಮತದ ಅಭ್ಯರ್ಥಿಯನ್ನು ಲೋಕಸಭಾ ಕಣಕ್ಕೆ ಇಳಿಸುವ ಮೂಲಕ ಭರ್ಜರಿ ಗೆಲುವು ದಾಖಲಿಸುವುದಾಗಿ ಎಲ್ಲಾ ಶಾಸಕರೂ ಭರವಸೆಯ ಮಾತುಗಳನ್ನಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT